ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ವಸಂತ ಬಂಗೇರಾಗೆ ಗೇಟ್ಪಾಸ್ : ಜೆಡಿಎಸ್ನಲ್ಲಿ ತಳಮಳ
ಬೆಂಗಳೂರು : ಪಕ್ಷವಿರೋಧಿ ಚಟುವಟಿಕೆಗಳನ್ನು ನಡೆಸಿದ ಆರೋಪದ ಮೇಲೆ, ವಸಂತ ಬಂಗೇರಾ ಅವರನ್ನು ಜಾತ್ಯತೀತ ಜನತಾದಳದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.
ಪಕ್ಷದ ರಾಜ್ಯ ಕಾರ್ಯದರ್ಶಿ ವೈ.ಎಸ್.ವಿ.ದತ್ತ, ಶನಿವಾರ(ಮಾರ್ಚ್ 24) ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ನಿರ್ದೇಶನದ ಮೇರೆಗೆ, ಪಕ್ಷದ ರಾಜ್ಯಾಧ್ಯಕ್ಷ ಎಂ.ಪಿ.ಪ್ರಕಾಶ್ ಈ ಕ್ರಮ ಕೈಗೊಂಡಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ವಸಂತ ಬಂಗೇರಾ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಜನತಾದಳ ಅಧ್ಯಕ್ಷರಾಗಿ ಈ ಮೊದಲು ಕಾರ್ಯ ನಿರ್ವಹಿಸಿದ್ದರು. ಅಲ್ಲದೆ ಕರಾವಳಿ ಜಿಲ್ಲೆಗಳಲ್ಲಿ ಜಾತ್ಯತೀತ ಜನತಾದಳ ಬೆಳೆಯಲು ಸಾಕಷ್ಟು ಶ್ರಮಿಸಿದ್ದರು ಎಂಬ ಮಾತುಗಳೂ ಕೇಳಿಬಂದಿದ್ದವು. ಆದಾಗ್ಯೂ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವುದು ಪಕ್ಷದಲ್ಲಿ ಎಲ್ಲವೂ ನೆಟ್ಟಗಿಲ್ಲ ಎಂಬ ಸಂದೇಹಗಳಿಗೆ ಪುಷ್ಠಿ ನೀಡಿದಂತಾಗಿದೆ.
(ದಟ್ಸ್ ಕನ್ನಡ ವಾರ್ತೆ)
Story first published: Sunday, March 25, 2007, 5:30 [IST]