ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏ.20ರಂದು ಬೆಳಗಾವಿ ವಿಧಾನಸೌಧಕ್ಕೆ ಶಂಕುಸ್ಥಾಪನೆ

By Staff
|
Google Oneindia Kannada News

ಧಾರವಾಡ : ಬೆಳಗಾವಿ ವಿಧಾನಸೌಧ ನಿರ್ಮಾಣಕ್ಕೆ ಬಸವ ಜಯಂತಿ(ಏಪ್ರಿಲ್‌ 20)ಯಂದು ಶಂಕುಸ್ಥಾಪನೆ ನಡೆಯಲಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸುವರ್ಣ ಕರ್ನಾಟಕ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ಬೆಳಗಾವಿ ವಿವಾದವನ್ನು ಪದೇಪದೇ ಎತ್ತುತ್ತಿದೆ. ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಮೂಲಕ ಹಾಗೂ ವಿಧಾನಸೌಧ ನಿರ್ಮಾಣ ಕೈಗೆತ್ತಿಕೊಳ್ಳುವ ಮಹಾರಾಷ್ಟ್ರಕ್ಕೆ ತಕ್ಕ ಉತ್ತರ ನೀಡಿದ್ದೇವೆ ಎಂದು ಹೇಳಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕಿಮ್ಸ್‌ ಆಸ್ಪತ್ರೆಗೆ ಹೆಚ್ಚುಹಣ ಬಿಡುಗಡೆ ಮಾಡಲಾಗಿದೆ. ಹೈಕೋರ್ಟ್‌ ಸಂಚಾರಿ ಪೀಠ ಹಾಗೂ ನೀರಾವರಿ ಯೋಜನೆಗಳೂ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಬಜೆಟ್‌ನಲ್ಲಿ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ಅವರು ವಿವರಿಸಿದರು.

ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರ ‘ಕರ್ನಾಟಕ ಮತ್ತು ನೆರೆಹೊರೆಯ ಸಮಸ್ಯೆಗಳು’ ಎಂಬ ಪುಸ್ತಕ ಲೋಕಾರ್ಪಣೆಗೊಳಿಸಿದರು.

(ಏಜನ್ಸೀಸ್‌)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X