ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ದಾವಣಗೆರೆಯಲ್ಲಿ ಬಿಜೆಪಿಯ ‘ವಿಕಾಸಯಾತ್ರೆ’ಗೆ ಚಾಲನೆ
ದಾವಣಗೆರೆ : ಭಾರತೀಯ ಜನತಾ ಪಕ್ಷದ ‘ವಿಕಾಸಯಾತ್ರೆ’ಗೆ ಪಕ್ಷದ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದಗೌಡ ಚಾಲನೆ ನೀಡಿದ್ದಾರೆ.
ಸೋಮವಾರ(ಏಪ್ರಿಲ್ 9) ಈ ಕುರಿತ ಸಮಾರಂಭದಲ್ಲಿ ಮಾತನಾಡಿದ ಸದಾನಂದಗೌಡ, ಕೆಳಹಂತದಿಂದ ಪಕ್ಷವನ್ನು ಬಲಗೊಳಿಸುವುದು ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಯಾತ್ರೆಯ ಗುರಿ. ರಾಜ್ಯಾದ್ಯಂತ ಮೂರು ಹಂತದಲ್ಲಿ ಒಟ್ಟು 15ದಿನಗಳ ಕಾಲ ಯಾತ್ರೆ ನಡೆಯಲಿದೆ ಎಂದು ಅವರು ವಿವರಿಸಿದರು.
ಆರೋಗ್ಯ ಸಚಿವ ಆರ್.ಅಶೋಕ್ ಹೊರತುಪಡಿಸಿ ಭಾರತೀಯ ಜನತಾ ಪಕ್ಷದ ಎಲ್ಲ ಸಚಿವರೂ ಸಮಾರಂಭದಲ್ಲಿ ಹಾಜರಿದ್ದರು. ಏಪ್ರಿಲ್ 24ರಂದು ಉಡುಪಿಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
(ಯುಎನ್ಐ)
Comments
Story first published: Tuesday, April 10, 2007, 5:30 [IST]