ಗೋ ಬ್ಯಾಂಕ್ ತೆರೆಯಲು ಸರ್ಕಾರ ಬದ್ಧ : ಕುಮಾರಸ್ವಾಮಿ
ರಾಮಚಂದ್ರಾಪುರ : ಗೋ ಬ್ಯಾಂಕ್ಗಳನ್ನು ತೆರೆಯಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ವಿಶ್ವ ಗೋ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ತಾಲ್ಲೂಕು ಕೇಂದ್ರಗಳಲ್ಲಿ ದೇಸೀ ಗೋ ತಳಿಗಳ ಬ್ಯಾಂಕ್ಗಳನ್ನು ತೆರೆಯಲು ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದೆ. ಗೋ ಸಾಕಣೆಯಲ್ಲಿ ಆಸಕ್ತಿಯಿರುವ ರೈತರು ಈ ಬ್ಯಾಂಕುಗಳಿಂದ ಸಾಲ ಪಡೆಯಬಹುದು ಎಂದು ತಿಳಿಸಿದರು.
ಗೋ ಬ್ಯಾಂಕ್ ಸ್ಥಾಪನೆಯಿಂದ ದೇಸೀ ಗೋವುಗಳ ತಳಿಗಳನ್ನು ರಕ್ಷಿಸುವುದರೊಂದಿಗೆ, ರೈತರ ಆದಾಯವನ್ನೂ ಹೆಚ್ಚಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಯಡಿಯೂರಪ್ಪ ; ಕುಮಾರಸ್ವಾಮಿ ದ್ವಂದ್ವಗಾನ : ಸಮ್ಮೇಳನಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಯಡಿಯೂರಪ್ಪ, ಗೋ ಹತ್ಯೆ ನಿಷೇಧದ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದರು. ಇದಾದ ಸ್ವಲ್ಪ ಹೊತ್ತಿನಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ, ಗೋ ಹತ್ಯೆ ನಿಷೇಧಿಸುವ ಯಾವುದೇ ಪ್ರಸ್ತಾಪ ತಮ್ಮ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)