ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕರುಣಾನಿಧಿ ರಾಜಿಗೆ ಬರೋಲ್ಲ.. ಕುಮಾರಣ್ಣ ಬಿಡೊಲ್ಲ.. Saturday, April 28 2007, 11:15 Hrs (IST)
ಮಂಗಳೂರು : ಕಾವೇರಿ ವಿವಾದದ ಬಗ್ಗೆ ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿಯನ್ನು ಮತ್ತೆ ಆಹ್ವಾನಿಸುತ್ತೇನೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥ ಪಡಿಸುವ ಇಂಗಿತ ನಮ್ಮದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು, ಕಾವೇರಿ ಕಣಿವೆಯಲ್ಲಿ ಲಭ್ಯವಿರುವ ನೀರಿನ ಪ್ರಮಾಣ, ಉಭಯ ರಾಜ್ಯಗಳು ನೀರನ್ನು ಹಂಚಿಕೊಳ್ಳುವ ಪ್ರಮಾಣದ ಬಗ್ಗೆ ಚರ್ಚೆ ನಡೆಸಲು ನಾವು ಉತ್ಸುಕರಾಗಿದ್ದೇವೆ. ನ್ಯಾಯಮಂಡಳಿ ಅಥವಾ ಸುಪ್ರೀಂ ಕೋರ್ಟ್ನ ಹೊರಗಡೆ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಸರ್ಕಾರ ಬಯಸುತ್ತದೆ ಎಂದರು.
ಎರಡೂ ಸರ್ಕಾರಗಳು ತಮ್ಮ ರಾಜ್ಯಗಳ ರೈತರ ಮನವೊಲಿಸಿ, ಒಂದು ಒಪ್ಪಂದಕ್ಕೆ ಬರಬೇಕಾಗಿದೆ. ಈ ನಿಟ್ಟಿನಲ್ಲಿ ಕರುಣಾನಿಧಿ, ನಮ್ಮ ಆಹ್ವಾನವನ್ನು ಸ್ವೀಕರಿಸಿದರೆ ಒಳ್ಳೆಯದು. ಇದರಿಂದ ಉಭಯ ರಾಜ್ಯಗಳ ನಡುವೆ ಬಾಂಧವ್ಯ ಬೆಳೆಯುತ್ತದೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
(ದಟ್ಸ್ ಕನ್ನಡ ವಾರ್ತೆ)
Comments
Story first published: Saturday, April 28, 2007, 5:30 [IST]