ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋಮನಾಥ ಚಟರ್ಜಿಗೆ ದಕ್ಕುವುದೇ ರಾಷ್ಟ್ರಪತಿ ಕುರ್ಚಿ?

By Staff
|
Google Oneindia Kannada News

ನವದೆಹಲಿ : ರಾಷ್ಟ್ರಪತಿ ಚುನಾವಣೆಯನ್ನು ರಾಜಕೀಯ ಪಕ್ಷಗಳು ಪ್ರತಿಷ್ಠೆ ಪ್ರಶ್ನೆಯಾಗಿ ಸ್ವೀಕರಿಸಿವೆ. ಬಿಜೆಪಿ ಪಕ್ಷ ಬೆಂಬಲಿಸುವ ವ್ಯಕ್ತಿ , ರಾಷ್ಟ್ರಪತಿಯಾಗಬಾರದೆಂದು ಕಾಂಗ್ರೆಸ್‌ ಕಸರತ್ತು ನಡೆಸಿದೆ.

ಈ ಮಧ್ಯೆ ರಾಷ್ಟ್ರಪತಿ ಹುದ್ದೆಗೆ ಲೋಕಸಭಾಧ್ಯಕ್ಷ ಸೋಮನಾಥ ಚಟರ್ಜಿ ಹೆಸರನ್ನು, ಕಾಂಗ್ರೆಸ್‌ ಪ್ರಸ್ತಾಪಿಸಿದೆ. ಎಡ ಪಕ್ಷಗಳು, ಪ್ರಾದೇಶಿಕ ಪಕ್ಷಗಳು ಚಟರ್ಜಿಯನ್ನು ಬೆಂಬಲಿಸುವ ಸಾಧ್ಯತೆಗಳಿವೆ.

ಅಬ್ದುಲ್‌ ಕಲಾಂ ಎರಡನೇ ಅವಧಿಗೆ ರಾಷ್ಟ್ರಪತಿಯಾಗುವುದಕ್ಕೆ ಬಿಜೆಪಿಯಲ್ಲಿ ಆಕ್ಷೇಪವಿಲ್ಲ. ಆದರೆ ಎನ್‌ಡಿಎ ಮೈತ್ರಿಕೂಟದ ಶಿವಸೇನೆ ನಾಯಕ ಬಾಳ ಠಾಕ್ರೆ, ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಸತ್‌ ಭವನಕ್ಕೆ ನುಗ್ಗಿ ದಾಳಿ ಮಾಡಿದ ಅಫ್ಜಲ್‌ ಗುರುಗೆ ಗಲ್ಲು ಶಿಕ್ಷೆ ಜಾರಿಗೊಳಿಸಲು, ಕಲಾಂ ಮೀನಾಮೇಷ ಎಣಿಸುತ್ತಿದ್ದಾರೆ. ಇದು ನಮ್ಮ ಅಸಮಾಧಾನಕ್ಕೆ ಕಾರಣ ಎಂದು ಠಾಕ್ರೆ ಹೇಳಿದ್ದಾರೆ.

ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್‌ ಕಾರಟ್‌, ಕಲಾಂ ಮರು ಆಯ್ಕೆ ಪ್ರಸ್ತಾಪವನ್ನು ವಿರೋಧಿಸಿದ್ದಾರೆ.

(ಏಜನ್ಸೀಸ್‌)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X