ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ದೇ.ಜವರೇಗೌಡರಿಗೆ ದಾಖಲೆ ಮೊತ್ತದ ಬಿಎಂಟಿಸಿ ಪ್ರಶಸ್ತಿ
ಬೆಂಗಳೂರು : ಸಾಹಿತ್ಯ ಪ್ರಶಸ್ತಿಗಳಲ್ಲಿ ಅತಿ ಹೆಚ್ಚಿನ ಮೊತ್ತದ ಪ್ರಶಸ್ತಿ ಎಂದು ಗುರ್ತಿಸಲ್ಪಟ್ಟಿರುವ ನೃಪತುಂಗ ಪ್ರಶಸ್ತಿಗೆ, ಹಿರಿಯ ಸಾಹಿತಿ ಪ್ರೊ. ದೇ.ಜವರೇಗೌಡ ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಮಾರ್ಗದರ್ಶನದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಈ ಪ್ರಶಸ್ತಿಯನ್ನು ನೀಡುತ್ತಿದೆ. ಪ್ರಶಸ್ತಿ 5ಲಕ್ಷ ರೂ.ಗಳ ನಗದು ಬಹುಮಾನವನ್ನು ಒಳಗೊಂಡಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಐ.ಎಂ.ವಿಠಲಮೂರ್ತಿ, ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಗೀತಾ ನಾಗಭೂಷಣ, ಹಂಪಿ ವಿವಿ ವಿಶ್ರಾಂತ ಕುಲಪತಿ ಪ್ರೊ.ಹೆಚ್.ಎಸ್.ಲಕ್ಕಪ್ಪಗೌಡ, ಸಾಹಿತಿ ಬಿ.ಎ.ಸನದಿ ಅವರನ್ನು ಒಳಗೊಂಡ ಆಯ್ಕೆ ಸಮಿತಿ, ಜವರೇಗೌಡರ ಹೆಸರನ್ನು ಅಂತಿಮಗೊಳಿಸಿದೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Thursday, May 10, 2007, 5:30 [IST]