ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬನ್ನಿ ಹಳ್ಳಿಗೆ, ನಿಮ್ಮ ಬಣ್ಣ ಗೊತ್ತಾಗುತ್ತದೆ.. -ಕುಮಾರಸ್ವಾಮಿ

By Staff
|
Google Oneindia Kannada News

ಬೆಂಗಳೂರು : ‘ಕಾಂಗ್ರೆಸ್‌ ನಾಯಕರು ನನ್ನೊಂದಿಗೆ ಗ್ರಾಮ ವಾಸ್ತವ್ಯ ಮಾಡಿದರೆ, ಮೂರು ದಶಕಗಳ ಕಾಲ ಆಡಳಿತ ನಡೆಸಿದ ಅವರ ಪಕ್ಷದ ವೈಫಲ್ಯ ಎಷ್ಟರ ಮಟ್ಟಿಗಿದೆ ಎಂದು ತಿಳಿಯುತ್ತದೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, 120 ವರ್ಷಗಳ ಇತಿಹಾಸದ ಹೊರತಾಗಿಯೂ ಕಾಂಗ್ರೆಸ್‌ ಪಕ್ಷ ರಾಜಕೀಯ ಬರ ಎದುರಿಸುತ್ತಿದೆ. ಸರ್ಕಾರದ ವಿರುದ್ಧ ರ್ಯಾಲಿಗಳನ್ನು ನಡೆಸುವುದನ್ನು ಅದು ಉದ್ಯೋಗ ಮಾಡಿಕೊಂಡಿದೆ ಎಂದು ಟೀಕಿಸಿದರು.

ಹಿನ್ನೆಲೆ : ಕಾಂಗ್ರೆಸ್‌ ಪಕ್ಷ ನಗರದಲ್ಲಿ ಮೇ 14ರಂದು ರ್ಯಾಲಿ ನಡೆಸಿ, ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ 15 ಅಂಶಗಳ ಆರೋಪ ಪಟ್ಟಿ ಸಲ್ಲಿಸಿತ್ತು. ರಾಜ್ಯ ಸರ್ಕಾರ ಎಲ್ಲ ವಿಭಾಗಗಳಲ್ಲೂ ವಿಫಲವಾಗಿದ್ದು, ತಕ್ಷಣವೇ ವಜಾಗೊಳಿಸಬೇಕು ಎಂದು ಅದು ರಾಜ್ಯಪಾಲ ಟಿ.ಎನ್‌.ಚತುರ್ವೇದಿ ಅವರನ್ನು ಒತ್ತಾಯಿಸಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೇಲ್ಕಂಡಂತೆ ಪ್ರತಿಕ್ರಿಯಿಸಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X