ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಉಳ್ಳಾಲ ಚುನಾವಣೆ ಪ್ರಚಾರಕ್ಕೆ ಸಿಧು, ಸುಶ್ಮಾ, ಮೋದಿ...
ಬೆಂಗಳೂರು : ಉಳ್ಳಾಲ ವಿಧಾನ ಸಭಾ ಕ್ಷೇತ್ರದ ಚುನಾವಣೆ ರಂಗೇರುತ್ತಿದೆ.
ಮಾಜಿ ಕ್ರಿಕೆಟಿಗ ಮತ್ತು ಸಂಸದ ನವಜೋತ್ ಸಿಂಗ್ ಸಿಧು, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ಮಾಜಿ ಸಚಿವೆ ಸುಶ್ಮಾ ಸ್ವರಾಜ್ ಮತ್ತಿತರರನ್ನು ಪ್ರಚಾರಕ್ಕೆ ಕರೆತರಲು ಬಿಜೆಪಿ ರಾಜ್ಯ ಘಟಕ ಉತ್ಸುಕವಾಗಿದೆ.
ಸುದ್ದಿಗಾರರ ಜೊತೆ ಈ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿ ವಕ್ತಾರ ಸುರೇಶ್ ಕುಮಾರ್, ರಾಜ್ಯ ಬಿಜೆಪಿ ಘಟಕದ ನಾಯಕರು ಮತ್ತು ಕಾರ್ಯಕರ್ತರು, ಹೈಕಮಾಂಡ್ ಮೇಲೆ ಒತ್ತಡ ಹೇರಿ, ರಾಷ್ಟ್ರೀಯ ನಾಯಕರನ್ನು ಪ್ರಚಾರಕ್ಕಾಗಿ ಕರೆತರಲಿದೆ ಎಂದರು.
ಪಕ್ಷದ ಸ್ಥಳೀಯ ನಾಯಕರು ಮನೆಮನೆಗೆ ತೆರಳಿ ಮತಯಾಚನೆ ನಡೆಸಲಿದ್ದಾರೆ. ಈ ಚುನಾವಣೆಯ ಸೋಲು-ಗೆಲುವಿನಿಂದ ದೋಸ್ತಿ ಸರ್ಕಾರಕ್ಕೆ ಯಾವುದೇ ತೊಡಕಾಗುವುದಿಲ್ಲ ಎಂದು ಸುರೇಶ್ ಕುಮಾರ್ ಅಭಿಪ್ರಾಯಪಟ್ಟರು.
(ದಟ್ಸ್ ಕನ್ನಡ ವಾರ್ತೆ)
Comments
Story first published: Friday, May 18, 2007, 5:30 [IST]