ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೈದರಾಬಾದ್‌ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ ಕಟ್ಟೆಚ್ಚರ

By Staff
|
Google Oneindia Kannada News

ಬೆಂಗಳೂರು : ಹೈದರಾಬಾದಿನ ಮೆಕ್ಕಾ ಮಸೀದಿಯಲ್ಲಿ ಬಾಂಬ್‌ ಸ್ಫೋಟವಾದ ಹಿನ್ನೆಲೆಯಲ್ಲಿ, ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಶನಿವಾರ ಕಟ್ಟೆಚ್ಚರ ವಹಿಸಲಾಗಿದೆ.

ನಗರದ ಸೂಕ್ಷ್ಮ ಪ್ರದೇಶಗಳು, ಪೂಜಾ ಮಂದಿರಗಳು, ರೈಲು ನಿಲ್ದಾಣ, ಬಸ್‌ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಲ್ಲಿ ಹೆಚ್ಚುವರಿ ಭದ್ರತೆಯನ್ನು ಒದಗಿಸಲಾಗಿದೆ. ಪೊಲೀಸರ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಲಾಗಿದೆ. ನಗರದ ಪೊಲೀಸರಿಗೆ ಸಹಾಯಕ್ಕೆ ಮೀಸಲು ಪಡೆಗಳ ನೆರವು ಪಡೆಯಲಾಗಿದೆ.

ಬೆಂಗಳೂರು ಅಲ್ಲದೆ ಬೀದರ್‌, ಗುಲ್ಭರ್ಗ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಕೂಡ ಪೊಲೀಸ್‌ಪಡೆಗಳನ್ನು ನಿಯೋಜಿಸಲಾಗಿದ್ದು, ಯಾವುದೇ ತರಹದ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ನಗರ ಪೊಲೀಸ್‌ ಆಯುಕ್ತ ಎನ್‌. ಅಚ್ಯುತ್‌ರಾವ್‌ ಹಾಗೂ ರಾಜ್ಯದ ಪೊಲೀಸ್‌ ಐಜಿ ಕೆ .ಆರ್‌. ಶ್ರೀನಿವಾಸ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ಪೂರಕ ಓದಿಗೆ
ಹೈದರಾಬಾದ್‌ನಲ್ಲಿ ಬಾಂಬ್‌ ಸ್ಫೋಟ : ಶನಿವಾರ ಕಂಡಂತೆ!

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X