ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರೈತರ ಸಾಲಮನ್ನಾ : ಬಿಜೆಪಿಯಿಂದ ರಾಜ್ಯವ್ಯಾಪಿ ಧರಣಿ...
ಹುಬ್ಬಳ್ಳಿ : ರಾಷ್ಟ್ರೀಕೃತ ಬ್ಯಾಂಕುಗಳಿಗೆ ರೈತರ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ, ಬಿಜೆಪಿ ರೈತ ಮೋರ್ಚಾ ಜೂನ್ 11ರಂದು ರಾಜ್ಯಾದ್ಯಂತ ಧರಣಿ ನಡೆಸಲಿದೆ.
ಬಿಜೆಪಿ ರಾಜ್ಯರೈತ ಮೋರ್ಚಾ ಅಧ್ಯಕ್ಷ ಈಶ್ವರಚಂದ್ರ ಹೊಸಮನಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ವಿಷಯ ಹೊರಹಾಕಿದ್ದಾರೆ.
ಜುಲೈ 11ನೇ ತಾರೀಖಿನಂದು ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಯೆದುರು ಧರಣಿ ನಡೆಸಲಿದ್ದೇವೆ. ಆನಂತರ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿ ಮನಮೋಹನ್ಸಿಂಗ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
(ಯುಎನ್ಐ)
Comments
Story first published: Sunday, May 20, 2007, 5:30 [IST]