ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಿಎಂ ಭರವಸೆ ಕಬ್ಬು ಬೆಳೆಗಾರರ ಆತ್ಮಹತ್ಯೆತಡೆಯುವುದೇ?
ಬೀದರ್ : ತೀವ್ರ ಸಂಕಷ್ಟಕ್ಕೀಡಾಗಿರುವ ಕಬ್ಬು ಬೆಳೆಗಾರರಿಗೆ, ಸರ್ಕಾರ ಪರಿಹಾರ ನಿಧಿ ಪ್ರಕಟಿಸಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ಅವರು ಹುಮ್ನಾಬಾದ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಕಬ್ಬು ಬೆಳೆಗಾರರಿಗೆ ಸರ್ಕಾರ ತನ್ನಿಂದಾಗುವ ಎಲ್ಲ ಸಹಾಯವನ್ನೂ ಮಾಡಲಿದೆ. ಹಾಗಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕೆಂದು ಮನವಿಮಾಡಿಕೊಂಡರು.
ಕೆಲವು ರೈತ ನಾಯಕರು ಕಬ್ಬು ಮಾರಾಟ ಮಾಡದಂತೆ ರೈತರನ್ನು ದಾರಿತಪ್ಪಿಸುತ್ತಿದ್ದಾರೆ. ಇದು ಸಮಸ್ಯೆಗೆ ದಾರಿ ಮಾಡಿಕೊಟ್ಟಿದೆ ಎಂದು ಅವರು ಅಭಿಪ್ರಾಯಪಟ್ಟರು.
ನೆರೆಯ ಮಹಾರಾಷ್ಟ್ರದಲ್ಲಿ ಟನ್ಗೆ 1,700 ರೂಪಾಯಿ ನೀಡಲಾಗುತ್ತಿದೆ. ರಾಜ್ಯದಲ್ಲೂ ಇದೇ ರೀತಿಯ ಬೆಲೆ ದೊರಕಿಸಿಕೊಡುವ ಪ್ರಯತ್ನ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.
ಸಿಹಿ ಉಣಿಸೋರ ಕಷ್ಟ -ಕಾರ್ಪಣ್ಯ : ಜೂ.6ರಿಂದ ಧರಣಿ
(ದಟ್ಸ್ ಕನ್ನಡ ವಾರ್ತೆ)
Comments
Story first published: Wednesday, May 23, 2007, 5:30 [IST]