ಸಾಲದ ಬಾಧೆ : ಗದಗ ಜಿಲ್ಲೆಯಲ್ಲಿ ಓರ್ವ ರೈತನ ಆತ್ಮಹತ್ಯೆ

ಹುಬ್ಬಳ್ಳಿ : ಸಾಲದ ಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ನೆಲ್ಲೂರು ಗ್ರಾಮದಲ್ಲಿ ನಡೆದಿದೆ.

ಬೆಲ್ಲುಂಡೆಪ್ಪ ಬೆಲ್ಲಪ್ಪನವರ್‌(44) ಮೃತ ದುರ್ದೈವಿ. ವ್ಯವಸಾಯಕ್ಕಾಗಿ ಮಾಡಿದ್ದ ಸಾಲ ಮರಳಿಸಲು ಅಸಾಧ್ಯವಾದ ಹಿನ್ನೆಲೆಯಲ್ಲಿ ಬೆಲ್ಲುಂಡೆಪ್ಪ ಈ ತೀರ್ಮಾನಕ್ಕೆ ಬಂದಿದ್ದ ಎನ್ನಲಾಗಿದೆ.

ವಿಷ ಸೇವಿಸಿದ್ದ ಬೆಲ್ಲುಂಡೆಪ್ಪನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಎಂದು ಪೊಲೀಸ್‌ ಮೂಲಗಳು ಹೇಳಿವೆ.

(ಯುಎನ್‌ಐ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+