ರಾಷ್ಟ್ರಗೀತೆವಿವಾದ: ಹೈಕೋರ್ಟ್ಗೆ ನಾರಾಯಣಮೂರ್ತಿ
ಬೆಂಗಳೂರು : ರಾಷ್ಟ್ರಗೀತೆ ವಿವಾದಕ್ಕೆ ಸಂಬಂಧಿಸಿದಂತೆ ಇನ್ಫೋಸಿಸ್ ನಾರಾಯಣಮೂರ್ತಿ, ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ತಮ್ಮ ವಿರುದ್ಧ ಸೆಷನ್ಸ್ ಕೋರ್ಟ್ ಹೊರಡಿಸಿರುವ ಆದೇಶವನ್ನು, ಅವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ. ಹೈಕೋರ್ಟ್ನಲ್ಲಿ ಈ ಸಂಬಂಧದ ವಿಚಾರಣೆ ನಡೆಯಲಿದೆ.
ಹಿನ್ನೆಲೆ : ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆಂದು ನಾರಾಯಣಮೂರ್ತಿ ವಿರುದ್ಧ, ಕೆಲವರು ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನಾರಾಯಣಮೂರ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿತ್ತು.
ಅರ್ಜಿಯನ್ನು ವಿಚಾರಣೆಗೆತ್ತಿಕೊಂಡ ನ್ಯಾಯಾಲಯ, ಜೂ.21ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ, ನಾರಾಯಣಮೂರ್ತಿ ಅವರಿಗೆ ಆದೇಶ ನೀಡಿತ್ತು. ಈ ಆದೇಶ ಪ್ರಶ್ನಿಸಿ ಹೈಕೋರ್ಟ್ ಮುಂದೆ ನಾರಾಯಣಮೂರ್ತಿ ನಿಂತಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications