ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಿರುಪತಿ ವ್ಯಾಪ್ತಿಯಲ್ಲಿ ಅನ್ಯಧರ್ಮ ಪ್ರಚಾರಕ್ಕೆ ಕಠಿಣ ಶಿಕ್ಷೆ

By Staff
|
Google Oneindia Kannada News

ಹೈದರಾಬಾದ್‌ : ತಿರುಪತಿಯಲ್ಲಿ ಕ್ರಿಶ್ಚಿಯನ್‌ ಮಿಷನರಿಗಳು ಮತಾಂತರ ತಡೆಯಲು ಆಂಧ್ರ ಸರ್ಕಾರ ಮುಂದಾಗಿದೆ.

ತಿರುಪತಿ ವ್ಯಾಪ್ತಿಯಲ್ಲಿ ಮತಾಂತರ ಪ್ರಕ್ರಿಯೆ ಬಿರುಸಾಗಿದೆ. ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಆಂಧ್ರ ಸರ್ಕಾರ ಹೊಸ ಸುಗ್ರೀವಾಜ್ಞೆ ಹೊರಡಿಸಿದೆ. ಧಾರ್ಮಿಕ ಕ್ಷೇತ್ರಗಳಲ್ಲಿ, ಇನ್ನೊಂದು ಧರ್ಮದ ಪ್ರಚಾರ ಮಾಡುವಂತಿಲ್ಲ. ನಿಷೇಧ ಉಲ್ಲಂಘಿಸಿದರೇ, 5000 ರು. ದಂಡ, 3ವರ್ಷ ಜೈಲು ಶಿಕ್ಷೆ ವಿಧಿಸುವುದಾಗಿ ಸರ್ಕಾರ ಎಚ್ಚರಿಸಿದೆ.

ತಿರುಪತಿ ತಿರುಮಲ ಕ್ಷೇತ್ರ ವ್ಯಾಪ್ತಿಯ ಏಳು ಬೆಟ್ಟಗಳು, 10 ತೀರ್ಥಗಳು, ಶ್ರೀಶೈಲ ಮತ್ತಿತರ ಹಿಂದೂಗಳ ಧಾರ್ಮಿಕ ಕ್ಷೇತ್ರಗಳಲ್ಲಿ, ಅನ್ಯಧರ್ಮದ ಪ್ರಚಾರವನ್ನು ನಿಷೇಧಿಸಲಾಗಿದೆ ಎಂದು ಸುಗ್ರೀವಾಜ್ಞೆಯಲ್ಲಿ ಹೇಳಲಾಗಿದೆ.

(ಏಜನ್ಸೀಸ್‌)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X