ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಜೂನ್ 19ರಿಂದ ಪೂಚಂತೇ ಜೀವನ-ಕೃತಿಗಳ ಮೇಲೆ ಬೆಳಕು ಚೆಲ್ಲುವ ಕಾರ್ಯಕ್ರಮ
ಬೆಂಗಳೂರು : ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಜೀವನ ಮತ್ತು ಸಾಹಿತ್ಯದ ಮೇಲೆ ಬೆಳಕು ಚೆಲ್ಲುವ ತೇಜಸ್ವಿ ಮಾಯಾಲೋಕ ಕಾರ್ಯಕ್ರಮ ಜೂನ್ 19ರಿಂದ 24ರವರೆಗೆ ನಡೆಯಲಿದೆ.
ಕನ್ನಡ ಪುಸ್ತಕ ಪ್ರಾಧಿಕಾರ, ಲಲಿತಕಲಾ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾಹಿತ್ಯ ಅಕಾಡೆಮಿ ಸಹಯೋಗದೊಂದಿಗೆ ಕರ್ನಾಟಕ ನಾಟಕ ಅಕಾಡೆಮಿಯು ಈ ಕಾರ್ಯಕ್ರಮ ಆಯೋಜಿಸಿದೆ.
ರವೀಂದ್ರ ಕಲಾಕ್ಷೇತ್ರ ಹಾಗೂ ನಯನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ಕಿರುಗೂರಿನ ಗಯ್ಯಾಳಿಗಳು ರಂಗಪ್ರಯೋಗ ಸೇರಿದಂತೆ ವಿವಿಧ ನಾಟಕಗಳು ಪ್ರದರ್ಶನಗೊಳ್ಳಲಿವೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : ಕರ್ನಾಟಕ ನಾಟಕ ಅಕಾಡೆಮಿ, ದೂರವಾಣಿ ಸಂಖ್ಯೆ - (080)22237484.
(ದಟ್ಸ್ ಕನ್ನಡ ವಾರ್ತೆ)
Comments
Story first published: Sunday, June 17, 2007, 5:30 [IST]