ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಉಪರಾಷ್ಟ್ರಪತಿ ಹುದ್ದೆ ಮೇಲೆ ದೇವೇಗೌಡರು ಕಣ್ಣಿಟ್ಟಿಲ್ಲ
ಬೆಂಗಳೂರು : ಉಪರಾಷ್ಟ್ರಪತಿ ಸ್ಥಾನದ ಮೇಲೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಣ್ಣಿಟ್ಟಿಲ್ಲ ಎಂದು ಜೆಡಿಎಸ್ ಪಕ್ಷದ ಮುಖಂಡ ಮತ್ತು ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು, ರಾಷ್ಟ್ರಪತಿ ಚುನಾವಣೆಗೆ ಸಂಬಂಸಿದಂತೆ ಪಕ್ಷದ ನಿಲುವನ್ನು ದೇವೇಗೌಡರು ಸದ್ಯದಲ್ಲಿಯೇ ಪ್ರಕಟಿಸಲಿದ್ದಾರೆ ಎಂದರು.
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಸಮಾನ ಅಂತರವನ್ನು ಜೆಡಿಎಸ್ ಕಾಯ್ದುಗೊಂಡಿದೆ. ಹೀಗಾಗಿ ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಬೆಂಬಲ ಹೊಂದಿರುವ ಪ್ರತಿಭಾ ಪಾಟೀಲ್ ಅವರನ್ನಾಗಲಿ, ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಭೈರೋಸಿಂಗ್ ಶೇಖಾವತ್ ಅವರನ್ನಾಗಲಿ ಜೆಡಿಎಸ್ ಬೆಂಬಲಿಸುವುದಿಲ್ಲ ಎಂಬುದು ನನ್ನ ವೈಯಕ್ತಿಕ ಅನಿಸಿಕೆ. ಈ ಬಗ್ಗೆ ಸದ್ಯದಲ್ಲಿಯೇ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ.
ಜೆಡಿಎಸ್ ಮತ್ತಿತರ ಪಕ್ಷಗಳ ತೃತೀಯ ರಂಗ ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಮುಖ ಪಾತ್ರವಹಿಸಲಿದೆ ಎಂದು ಹೊರಟ್ಟಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
Comments
Story first published: Monday, June 18, 2007, 5:30 [IST]