ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕರುಣಾನಿಧಿ ನನ್ಗೆ ತಂದೆ ಸಮಾನ : ಕುಮಾರಸ್ವಾಮಿ
ಬೆಂಗಳೂರು : ತಮಿಳುನಾಡು ಮುಖ್ಯಮಂತ್ರಿ ಎಂ.ಕರುಣಾನಿಧಿ, ರಾಜ್ಯದಿಂದ ಕಾವೇರಿ ನೀರು ಬಿಡುಗಡೆ ಮಾಡಿಸುವಂತೆ ಕೋರಿ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಮತ್ತೊಂದು ಕಡೆ ಕರುಣಾನಿಧಿ ನನ್ನ ತಂದೆ ಸಮಾನರು ಎಂದು ಅಭಿಪ್ರಾಯಪಟ್ಟಿದ್ದಾರೆ.
ಎರಡೂ ರಾಜ್ಯಗಳು ಸಹಕಾರದಿಂದ ಬಾಳಬೇಕಾಗಿದೆ. ಈ ನಿಟ್ಟಿನಲ್ಲಿ ಕರುಣಾನಿಧಿ ಅವರು ಕೇಂದ್ರಕ್ಕೆ ಪತ್ರ ಬರೆದದ್ದು ಮಾತ್ರ ಸರಿಯಲ್ಲ. ಆದರೆ ಅವರನ್ನು ಹಿರಿಯ ರಾಜಕಾರಣಿಯಾಗಿ ಗೌರವಿಸುತ್ತೇನೆ. ನನ್ನ ರಾಜಕೀಯ ಜೀವನದಲ್ಲಿ ಅವರು ತಂದೆಯ ಸಮಾನರು ಎಂದು ಕುಮಾರಸ್ವಾಮಿ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಕರುಣಾನಿಧಿ ಅವರು ಬರೆದ ಪತ್ರ ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ. ಅಲ್ಲದೆ ಎರಡೂ ರಾಜ್ಯಗಳ ರೈತರಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸಿದೆ ಎಂದು ಅಭಿಪ್ರಾಯಪಟ್ಟರು.
(ಯುಎನ್ಐ)
Comments
Story first published: Monday, July 9, 2007, 5:30 [IST]