ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಣ್ಣ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ
ಬೆಂಗಳೂರು, ಜುಲೈ 11 : ಬೆಂಗಳೂರು ನಗರ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳನ್ನು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೃಷಿ ಇಲಾಖೆಯು ರಿಯಾಯಿತಿ ದರದಲ್ಲಿ ವಿತರಿಸಲಿದೆ.
ಅತೀ ಮುಖ್ಯ ಬೆಳೆಗಳಾದ ಭತ್ತ, ಜೋಳ, ರಾಗಿ, ಮುಸುಕಿನ ಜೋಳ, ತೊಗರಿ, ಹೆಸರು, ಉದ್ದು, ಆಲಸಂಡೆ, ಹುರಳಿ, ನೆಲೆಗಡಲೆ, ಸೂರ್ಯಕಾಂತಿ ಸೋಯಾ, ಆವರೆ, ಹರಳು ಮತ್ತು ಹತ್ತಿ ಬಿತ್ತನೆ ಬೀಜಗಳನ್ನು ಶೇಕಡಾ 75 ರ ರಿಯಾಯತಿ ದರದಲ್ಲಿ ರೈತರಿಗೆ ವಿತರಿಸಲಾಗುವುದು.
ಬಿತ್ತನೆ ಬೀಜಗಳು ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿದ್ದು, ಕಂದಾಯ ಇಲಾಖೆಯಿಂದ ಗುರುತಿಸಲ್ಪಟ್ಟಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಮಾತ್ರ ಈ ರಿಯಾಯಿತಿ ಸೌಲಭ್ಯವಿರುತ್ತದೆ. ಅಧಿಕೃತ ಮಾರಾಟಗಾರರಿಂದ ಮಾತ್ರ ಬಿತ್ತನೆ ಬೀಜ ಪಡೆದು ಅಧಿಕೃತ ರಸೀತಿ ಪಡೆಯುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ರೈತರಿಗೆ ತಿಳಿಸಿದ್ದಾರೆ.
Comments
Story first published: Wednesday, July 11, 2007, 5:30 [IST]