ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಣ್ಣ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ

By Staff
|
Google Oneindia Kannada News

Qualityseedsಬೆಂಗಳೂರು, ಜುಲೈ 11 : ಬೆಂಗಳೂರು ನಗರ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳನ್ನು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೃಷಿ ಇಲಾಖೆಯು ರಿಯಾಯಿತಿ ದರದಲ್ಲಿ ವಿತರಿಸಲಿದೆ.

ಅತೀ ಮುಖ್ಯ ಬೆಳೆಗಳಾದ ಭತ್ತ, ಜೋಳ, ರಾಗಿ, ಮುಸುಕಿನ ಜೋಳ, ತೊಗರಿ, ಹೆಸರು, ಉದ್ದು, ಆಲಸಂಡೆ, ಹುರಳಿ, ನೆಲೆಗಡಲೆ, ಸೂರ್ಯಕಾಂತಿ ಸೋಯಾ, ಆವರೆ, ಹರಳು ಮತ್ತು ಹತ್ತಿ ಬಿತ್ತನೆ ಬೀಜಗಳನ್ನು ಶೇಕಡಾ 75 ರ ರಿಯಾಯತಿ ದರದಲ್ಲಿ ರೈತರಿಗೆ ವಿತರಿಸಲಾಗುವುದು.

ಬಿತ್ತನೆ ಬೀಜಗಳು ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿದ್ದು, ಕಂದಾಯ ಇಲಾಖೆಯಿಂದ ಗುರುತಿಸಲ್ಪಟ್ಟಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಮಾತ್ರ ಈ ರಿಯಾಯಿತಿ ಸೌಲಭ್ಯವಿರುತ್ತದೆ. ಅಧಿಕೃತ ಮಾರಾಟಗಾರರಿಂದ ಮಾತ್ರ ಬಿತ್ತನೆ ಬೀಜ ಪಡೆದು ಅಧಿಕೃತ ರಸೀತಿ ಪಡೆಯುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ರೈತರಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X