ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ಭಯೋತ್ಪಾದನಾ ಕೇಂದ್ರವಲ್ಲ : ಕುಮಾರಸ್ವಾಮಿ

By Staff
|
Google Oneindia Kannada News

ಬೆಂಗಳೂರು, ಜುಲೈ 29 : ಆಸ್ಟ್ರೇಲಿಯಾ ಪೊಲೀಸ್ ಡಾ.ಮೊಹಮ್ಮದ್ ಹನೀಫ್ ವಿರುದ್ಧದ ಆರೋಪಗಳನ್ನು ಕೈಬಿಡುವುದರೊಂದಿಗೆ, ಬೆಂಗಳೂರು ಭಯೋತ್ಪಾದನಾ ಕೇಂದ್ರವಾಗುತ್ತಿಲ್ಲ ಎಂಬುದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಶನಿವಾರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಆಸ್ಟ್ರೇಲಿಯಾ ಪೊಲೀಸರು ಡಾ.ಮೊಹಮ್ಮದ್ ಹನೀಫ್ ವಿರುದ್ಧದ ಆರೋಪಗಳನ್ನು ಕೈ ಬಿಟ್ಟ ಸುದ್ದಿ ಕೇಳಿ, ತುಂಬಾ ನಿರಾಳಗೊಂಡಿದ್ದೇನೆ. ಇದರೊಂದಿಗೆ ನಗರಕ್ಕೂ ಭಯೋತ್ಪಾದಕ ಚಟುವಟಿಕೆಗಳಿಗೂ ಯಾವುದೇ ಸಂಬಂಧವಿಲ್ಲ ಎಂಬುದು ಸಾಬೀತಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

(ಯುಎನ್ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X