ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮಲೆನಾಡು-ಕರಾವಳಿಯಲ್ಲಿ ವಿಪರೀತ ಮಳೆ : 9ಸಾವು
ಬೆಂಗಳೂರು, ಆಗಸ್ಟ್ 06 : ಮಲೆನಾಡು ಮತ್ತು ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, 9ಮಂದಿ ಸಾವಿಗೀಡಾಗಿದ್ದಾರೆ.
ಧಾರವಾಡ ಜಿಲ್ಲೆ ಕರಡಿಗುಡ್ಡದಲ್ಲಿ ಮನೆ ಕುಸಿದ ಕಾರಣ 4ಜನ ಅಸುನೀಗಿದ್ದಾರೆ. ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ತಲಾ 2 ಮತ್ತು ಉಡುಪಿ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಶಿವಮೊಗ್ಗ, ಬೆಳಗಾವಿ, ಮಡಿಕೇರಿ, ಚಿಕ್ಕಮಗಳೂರು, ಕಾರವಾರ ಜಿಲ್ಲೆಗಳಲ್ಲಿ ಹೊಳೆ ಹಳ್ಳಗಳು ತುಂಬಿ ಹರಿಯುತ್ತಿವೆ. ಹಲವೆಡೆ ಹೊಲಗದ್ದೆಗಳಿಗೆ ನೀರು ನುಗ್ಗಿದೆ.
ಈ ಹಿನ್ನೆಲೆಯಲ್ಲಿ ಸಾರಿಗೆ, ವಿದ್ಯುತ್ ಮೊದಲಾದ ಸಂಪರ್ಕಗಳು ಬಹುತೇಕ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
(ಏಜನ್ಸೀಸ್)
Comments
Story first published: Monday, August 6, 2007, 5:30 [IST]