ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಲೆನಾಡು-ಕರಾವಳಿಯಲ್ಲಿ ವಿಪರೀತ ಮಳೆ : 9ಸಾವು

By Staff
|
Google Oneindia Kannada News

ಬೆಂಗಳೂರು, ಆಗಸ್ಟ್ 06 : ಮಲೆನಾಡು ಮತ್ತು ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, 9ಮಂದಿ ಸಾವಿಗೀಡಾಗಿದ್ದಾರೆ.

ಧಾರವಾಡ ಜಿಲ್ಲೆ ಕರಡಿಗುಡ್ಡದಲ್ಲಿ ಮನೆ ಕುಸಿದ ಕಾರಣ 4ಜನ ಅಸುನೀಗಿದ್ದಾರೆ. ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ತಲಾ 2 ಮತ್ತು ಉಡುಪಿ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

ಶಿವಮೊಗ್ಗ, ಬೆಳಗಾವಿ, ಮಡಿಕೇರಿ, ಚಿಕ್ಕಮಗಳೂರು, ಕಾರವಾರ ಜಿಲ್ಲೆಗಳಲ್ಲಿ ಹೊಳೆ ಹಳ್ಳಗಳು ತುಂಬಿ ಹರಿಯುತ್ತಿವೆ. ಹಲವೆಡೆ ಹೊಲಗದ್ದೆಗಳಿಗೆ ನೀರು ನುಗ್ಗಿದೆ.

ಈ ಹಿನ್ನೆಲೆಯಲ್ಲಿ ಸಾರಿಗೆ, ವಿದ್ಯುತ್‌ ಮೊದಲಾದ ಸಂಪರ್ಕಗಳು ಬಹುತೇಕ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X