ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ವಿವಿಧೆಡೆ ಇನ್ನೆರಡು ದಿನ ವರುಣನ ಠಿಕಾಣಿ!

By Staff
|
Google Oneindia Kannada News

ಮಳೆ ಮಳೆ ಮಳೆ!ಎಲ್ಲೆಲ್ಲೂ ಮಳೆ! ಸಾಕು ಅನ್ನಿಸುವಷ್ಟು ಮಳೆ! ಈ ಮಳೆ ಕರ್ನಾಟಕದ ಕರಾವಳಿ ಸೇರಿದಂತೆ, ದಕ್ಷಣ ಒಳನಾಡಿನ ವಿವಿಧ ಪ್ರದೇಶಗಳಲ್ಲಿ ಇನ್ನೆರಡು ದಿನ ಮುಂದುವರೆಯಲಿದೆ.

ಹವಾಮಾನ ಇಲಾಖೆ ವರದಿ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮುಂದಿನ 48ಗಂಟೆಗಳಲ್ಲಿ ಹೆಚ್ಚಿನ ಮಳೆ ಬೀಳಲಿದೆ.

ರಾಜ್ಯದಲ್ಲಿ ಮಾತ್ರವಲ್ಲದೇ ಉತ್ತರ ಭಾರತದ ಗುಜರಾತ್, ಒರಿಸ್ಸಾ, ಅಸ್ಸೋಂ ಮತ್ತಿತರ ರಾಜ್ಯಗಳಲ್ಲೂ ವರ್ಷಧಾರೆ ಮುಂದುವರೆದಿದೆ.

* * *

ಪೆಟ್ರೋಲ್, ಡೀಸೆಲ್ ಹೆಚ್ಚಳ?

ಕಚ್ಚಾ ತೈಲದ ಹೆಚ್ಚಳದ ಬಗ್ಗೆ ಕೇಂದ್ರ ಆರ್ಥಿಕ ಸಚಿವ ಪಿ.ಚಿದಂಬರಂ ಕಳವಳಗೊಂಡಿದ್ದಾರೆ.

ಕಚ್ಚಾ ತೈಲದ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಡಿಮೆಯಾಗದಿದ್ದರೆ, ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಅನಿವಾರ್ಯವಾಗಲಿದೆ ಎಂಬ ಇಂಗಿತವನ್ನು ಸಚಿವರು ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X