ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹದಿನೆಂಟು ತಿಂಗಳಲ್ಲಿ ಡಾ.ರಾಜ್ ಕುಮಾರ್ ಸ್ಮಾರಕ ಪೂರ್ಣ

By Staff
|
Google Oneindia Kannada News

ಬೆಂಗಳೂರು, ಆಗಸ್ಟ್ 09 : ಡಾ.ರಾಜ್ ಕುಮಾರ್ ಸಮಾಧಿ ಸ್ಥಳದ ಬಳಿ ಮುಂದಿನ ಹದಿನೈದು ದಿನಗಳಲ್ಲಿ ಸ್ಮಾರಕ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಹೆಚ್.ಎಸ್.ಮಹದೇವಪ್ರಸಾದ್ ಹೇಳಿದ್ದಾರೆ.

ಗುರುವಾರ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು, ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ ಸಮಾಧಿ ಸ್ಥಳ ಸ್ಮಾರಕವಾಗಿ ರೂಪುಗೊಳ್ಳಲಿದೆ. ಈ ಕಾರ್ಯಕ್ಕಾಗಿ ಸುಮಾರು 10 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚಮಾಡಲಿದೆ. ಈಗಾಗಲೇ 3 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದರು.

ಮುಂದಿನ ಹದಿನೆಂಟು ತಿಂಗಳಲ್ಲಿ ಸ್ಮಾರಕ ಕಾಮಗಾರಿ ಮುಕ್ತಾಯವಾಗುವ ನಿರೀಕ್ಷೆ ಇದೆ. ಮ್ಯೂಸಿಯಂ, ಗ್ರಂಥಾಲಯ, ಯೋಗ ಕೇಂದ್ರ, ಸಭಾಂಗಣವನ್ನು ನಿರ್ಮಾಣ ಮಾಡಲಾಗುತ್ತದೆ. ಈ ಉದ್ದೇಶಕ್ಕಾಗಿ 2.5ಎಕರೆ ಪ್ರದೇಶವನ್ನು ಸರ್ಕಾರ ಕಾಯ್ದಿರಿಸಿದೆ ಎಂದು ಸಚಿವರು ಹೇಳಿದರು.

ರಾಜ್ ಸ್ಮಾರಕಕ್ಕಾಗಿ ಕನ್ನಡ ಪರ ಸಂಘಟನೆಯೊಂದು, ಪ್ರತಿಭಟನೆ ನಡೆಸುತ್ತಿರುವುದು ವಿಚಾರ ಇಲ್ಲಿ ಉಲ್ಲೇಖನೀಯ.

(ಯುಎನ್ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X