ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರು:ಅಖಿಲ ಭಾರತ ವಿಶ್ವವಿದ್ಯಾಲಯಗಳ ರಂಗೋತ್ಸವ

By Staff
|
Google Oneindia Kannada News

ಮೈಸೂರು, ಆಗಸ್ಟ್ 23 : ಅಖಿಲ ಭಾರತ ವಿಶ್ವವಿದ್ಯಾಲಯಗಳ ರಂಗೋತ್ಸವ, ಸೆಪ್ಟೆಂಬರ್ 17ರಿಂದ 30ತನಕ ನಗರದಲ್ಲಿ ನಡೆಯಲಿದೆ.

ಕನ್ನಡ ಮತ್ತು ಸಂಸ್ಕೃತಿ ಸಚಿವ ಹೆಚ್.ಎಸ್. ಮಹದೇವ ಪ್ರಸಾದ್ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ರಂಗೋತ್ಸವದಲ್ಲಿ 21 ವಿಶ್ವ ವಿದ್ಯಾಲಯಗಳು ಪಾಲ್ಗೊಳ್ಳಲಿವೆ. ರಾಜ್ಯ ಸರ್ಕಾರ ಮೈಸೂರು ವಿಶ್ವವಿದ್ಯಾಲಯ ಮತ್ತು ಕರ್ನಾಟಕ ನಾಟಕ ಅಕಾಡೆಮಿ ಜಂಟಿಯಾಗಿ ಈ ಉತ್ಸವವನ್ನು ಸಂಘಟಿಸಿವೆ ಎಂದು ತಿಳಿಸಿದರು.

ಬಿ.ವಿ.ಕಾರಂತರ ಹೆಸರಲ್ಲಿ ವಸ್ತು ಸಂಗ್ರಹಾಲಯವನ್ನು ಮೈಸೂರಿನಲ್ಲಿ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಈ ಉದ್ದೇಶಕ್ಕಾಗಿ ಕಾರಂತರಿಗೆ ಸಂಬಂಧಿಸಿದ ದಾಖಲೆ ಮತ್ತು ವಸ್ತುಗಳನ್ನು ನೀಡಲು ಅವರ ಪತ್ನಿ ಪ್ರೇಮ ಕಾರಂತ ಒಪ್ಪಿದ್ದಾರೆ ಎಂದು ಸಚಿವರು ಹೇಳಿದರು.

ಅಕ್ಟೋಬರ್ 12ರಿಂದ ಮೈಸೂರಿನಲ್ಲಿ ದಸರಾ ಉತ್ಸವ ಆರಂಭಗೊಳ್ಳಲಿದ್ದು, ಸರ್ಕಾರ ಪೂರಕ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಸಚಿವರು ವಿವರ ನೀಡಿದರು.

(ಯುಎನ್ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X