ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಅಬ್ದುಲ್ ಕಲಾಂಗೆ ಕರ್ನಾಟಕ ಸರ್ಕಾರದ ಬಸವಶ್ರೀ ಪ್ರಶಸ್ತಿ
ಬೆಂಗಳೂರು, ಆಗಸ್ಟ್ 24 : ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಗೆ ಮಾಜಿ ರಾಷ್ಟ್ರಪತಿ ಎ.ಬಿ.ಜೆ.ಅಬ್ದುಲ್ ಕಲಾಂ ಅವರನ್ನು ಆಯ್ಕೆ ಮಾಡಲಾಗಿದ್ದು, ಸೆಪ್ಟೆಂಬರ್ 28ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಶುಕ್ರವಾರ ಸುದ್ದಿಗಾರರ ಜೊತೆ ಈ ಬಗ್ಗೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಹೆಚ್.ಎಸ್.ಮಹದೇವ ಪ್ರಸಾದ್, ಪ್ರಶಸ್ತಿ ಸ್ವೀಕರಿಸಲು ಕಲಾಂ ಸಮ್ಮತಿಸಿದ್ದಾರೆ. ಸಮಾಜ ಮುಖಿಗಳನ್ನು ಆಯ್ಕೆ ಮಾಡಿ ಪ್ರತಿ ವರ್ಷ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿ ಮೊತ್ತವನ್ನು ಈ ವರ್ಷ ಒಂದು ಲಕ್ಷದಿಂದ 10ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ ಎಂದರು.
ಬೆಳಗಾವಿ ಹೆಸರನ್ನು ನಾಮಕರಣ ಮಾಡಲು ಕೇಂದ್ರ ಸರ್ಕಾರ ಅಸಮ್ಮತಿ ಸೂಚಿಸಿರುವ ಬಗ್ಗೆ ಮಾತನಾಡಿದ ಸಚಿವರು, ಕೇಂದ್ರದ ಜೊತೆ ಚರ್ಚೆ ನಡೆಸುವುದಾಗಿ ಹೇಳಿದರು.
(ಯುಎನ್ಐ)
Comments
Story first published: Friday, August 24, 2007, 5:30 [IST]