ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕೊಲ್ಲೂರು, ಮೈಸೂರು ದೇವಾಲಯಕ್ಕೆ ಸ್ವಾಯತ್ತತೆ ನೀಡಿಕೆ
ಕೊಲ್ಲೂರು, ಆಗಸ್ಟ್ 27 : ಕೊಲ್ಲೂರು ಮೂಕಾಂಬಿಕಾ ದೇ ವಾಲಯ ಸೇರಿದಂತೆ ರಾಜ್ಯದ ನಾಲ್ಕು ಪ್ರಮುಖ ದೇವಾಲಯಗಳಿಗೆ ಸ್ವಾಯತ್ತತೆ ನೀಡುವುದಾಗಿ ಸರ್ಕಾರ ಹೇಳಿದೆ.
ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಾಲಯ, ಮೈಸೂರಿನ ಚಾಮುಂಡೇಶ್ವರಿ ದೇವಾಲಯ, ಚಾಮರಾಜನಗರ ಜಿಲ್ಲೆಯ ಮಲೆ ಮಾದೇಶ್ವರ ದೇವಸ್ಥಾನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ದೇವಾಲಯಗಳು ಮುಜರಾಯಿ ಇಲಾಖೆಯ ಆಡಳಿತದಿಂದ ಮುಕ್ತವಾಗಲಿದೆ ಎಂದು ಮುಜರಾಯಿ ಇಲಾಖೆ ಸಚಿವ ಬಿ. ನಾಗರಾಜ ಶೆಟ್ಟಿ ಹೇಳಿದ್ದಾರೆ.
ರಾಜ್ಯದ ಸುಮಾರು 2,800 ದೇವಾಲಯಗಳ ಅಭಿವೃದ್ಧಿಗೆ ಸುಮಾರು 12 ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.
ಕೊಲ್ಲೂರಿನ ಮೂಕಾಂಬಿಕಾ ದೇವಾಲಯದ ಆಡಳಿತ ಮಂಡಳಿನಿರ್ಮಿಸಿರುವ 3.85 ಕೋಟಿ ರು ವೆಚ್ಚದ ಹಾಸ್ಟೆಲ್ ಉದ್ಘಾಟನೆ ಸಮಾರಂಭಕ್ಕೆ ಸಚಿವರು ಆಗಮಿಸಿದ್ದರು.
(ಏಜನ್ಸೀಸ್)
Comments
Story first published: Monday, August 27, 2007, 5:30 [IST]