ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಭಯೋತ್ಪಾದಕತೆ ಎದುರಿಸಲು ರಾಜ್ಯ ಸನ್ನದ್ಧ : ಎಚ್ಡಿಕೆ
ಬಳ್ಳಾರಿ, ಸೆಪ್ಟೆಂಬರ್ 04 : ಭಯೋತ್ಪಾದಕರು ಒಡ್ಡುವ ಎಂಥದೇ ಸವಾಲುಗಳನ್ನು ಎದುರಿಸಲು ರಾಜ್ಯ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕುಡ್ಲಿಗಿ ತಾಲೂಕಿನ ಪುತಳಕಟ್ಟೆ ಗ್ರಾಮದಲ್ಲಿ ವಾಸ್ತವ್ಯ ಹೂಡಿದ ನಂತರ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.
ಕಳೆದ ತಿಂಗಳು ಹೈದರಾಬಾದ್ನಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಯಾವುದೇ ಅವಘಡಗಳನ್ನು ತಪ್ಪಿಸಲು ತಕ್ಕ ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಪಡೆಯನ್ನು ಬಲಪಡಿಸಲಾಗಿದೆ ಎಂದು ಅವರು ತಿಳಿಸಿದರು.
ಐಟಿ ಬಿಟಿಯಿಂದಾಗಿ ಸಾಫ್ಟ್ವೇರ್ ಉದ್ಯಮದಲ್ಲಿ ಬೆಂಗಳೂರು ಕೇಂದ್ರಬಿಂದುವಾಗಿರುವುದರಿಂದ ಭಯೋತ್ಪಾದಕರು ಸಾಫ್ಟ್ವೇರ್ ಕಂಪನಿಗಳನ್ನು ಆಕ್ರಮಣ ಮಾಡುವ ಸಾಧ್ಯತೆಯಿದೆ. ಆದರೆ ಅವರು ಯಶಸ್ವಿಯಾಗಲು ಅವಕಾಶ ನೀಡುವುದಿಲ್ಲ ಎಂದು ಕುಮಾರಸ್ವಾಮಿ ನುಡಿದರು.
ಪುರಸಭೆ, ನಗರಸಭೆಗಳಿಗೆ ನಡೆಯಲಿರುವ ಚುನಾವಣೆಯ ಫಲಿತಾಂಶ ಜೆಡಿಎಸ್-ಬಿಜೆಪಿ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
(ಯುಎನ್ಐ)
Comments
Story first published: Tuesday, September 4, 2007, 5:30 [IST]