ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಹರಿಹರ ವಿಧಾನಸಭಾ ಕ್ಷೇತ್ರದ ನಾಗಪ್ಪ ಈಗ ಶಾಸಕರಲ್ಲ!
ದಾವಣಗೆರೆ , ಸೆಪ್ಟೆಂಬರ್ 06 : ಮಾಜಿ ಸಚಿವ ಮತ್ತು ಹರಿಹರ ಶಾಸಕ ವೈ.ನಾಗಪ್ಪ, ಇಕ್ಕಟ್ಟಿಗೆ ಸಿಲುಕಿದ್ದಾರೆ. ತಮ್ಮ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ.
ಹಿನ್ನೆಲೆ : 2004ರಲ್ಲಿ ಹರಿಹರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ವೈ.ನಾಗಪ್ಪ ಆಯ್ಕೆಯಾಗಿದ್ದರು. ಅವರ ಆಯ್ಕೆಯನ್ನು ಇದೀಗ ಹೈಕೋರ್ಟ್ ಅಸಿಂಧು ಎಂದು ಘೋಷಿಸಿದೆ.
ಕೇವಲ 569 ಮತಗಳ ಅಂತರದಿಂದ ಜೆಡಿಎಸ್ ಅಭ್ಯರ್ಥಿ ಹೆಚ್. ಶಿವಪ್ಪ ಅವರನ್ನು ನಾಗಪ್ಪ ಸೋಲಿಸಿದ್ದರು. ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಜೆಡಿಎಸ್ ಮತ ಎಣಿಕೆ ಏಜೆಂಟ್ ಪ್ರಸನ್ನ ಕುಮಾರ್, ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ನಾಗಪ್ಪ ಅವರ ಆಯ್ಕೆಯನ್ನು ರದ್ದು ಪಡಿಸಿದೆ. ತಿಂಗಳೊಳಗೆ ಮರು ಎಣಿಕೆ ನಡೆಸಿ, ಫಲಿತಾಂಶ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Thursday, September 6, 2007, 5:30 [IST]