ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರಾಜ್ಯದೆಲ್ಲೆಡೆ ಮತ ಎಣಿಕೆ ಆರಂಭ;ಮೈಸೂರು 'ಕೈ'ವಶ
ಬೆಂಗಳೂರು, ಸೆ.30 : ರಾಜ್ಯದ 209 ಸ್ಥಳೀಯ ಸಂಸ್ಥೆಗಳಿಗೆ ಶುಕ್ರವಾರ ನಡೆದ ಚುನಾವಣೆಯ ಮತಎಣಿಕೆ ಭಾನುವಾರ ಬೆಳಗ್ಗೆ 8ಗಂಟೆಯಿಂದ ಆರಂಭಗೊಂಡಿದೆ.
ರಾಜ್ಯದ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಆರಂಭಗೊಂಡಿದ್ದು, ಕೆಲವು ವಾರ್ಡ್ ಗಳ ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಸಂಜೆ ವೇಳೆಗೆ ಫಲಿತಾಂಶದ ಸ್ಪಷ್ಪ ಚಿತ್ರಣ ದೊರಕುವ ನಿರೀಕ್ಷೆ ಇದೆ.
ಮೈಸೂರು ಮಹಾನಗರ ಪಾಲಿಕೆ ಕಾಂಗ್ರೆಸ್ ಪಾಲಾಗಿದೆ. ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ವಿಜಯೋತ್ಸವ ಮತ್ತಿತರ ಕಾರ್ಯಕ್ರಮಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಚುನಾವಣೆ ನಡೆದ ಸ್ಥಳಗಳಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ.
ದೇಶದಲ್ಲೇ ಮೊದಲ ಭಾರಿಗೆ ಚುನಾವಣೆ ಫಲಿತಾಂಶವನ್ನು ನೇರವಾಗಿ ತಲುಪಿಸಲು ಚುನಾವಣಾ ಆಯೋಗ http://karsec.gov.in/ ನಲ್ಲಿ ನಡೆಸಿದ ಪ್ರಯತ್ನ ವಿಫಲವಾಗಿದೆ. ಸಕಾಲಕ್ಕೆ ಅಪ್ ಡೇಟ್ ಆಗದ ಕಾರಣ, ತಾಣಕ್ಕೆ ಬಂದವರು ನಿರಾಸೆಯಿಂದ ಮರಳುತ್ತಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Sunday, September 30, 2007, 13:22 [IST]