ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮತ್ತೆ ಕುಮಾರಸ್ವಾಮಿಯೇ ಮುಖ್ಯಮಂತ್ರಿ: ದೇವೇಗೌಡ
ಬೆಂಗಳೂರು, ಅ.1 : ಬಿಜೆಪಿಗೆ ಅಧಿಕಾರ ಹಸ್ತಾಂತರಿಸುವುದಿಲ್ಲ. ಮುಖ್ಯಮಂತ್ರಿಯಾಗಿ ಮುಂದುವರೆಯಲು ತಮ್ಮ ಪುತ್ರ ಕುಮಾರಸ್ವಾಮಿಗೆ ಬಿಜೆಪಿ ಸಹಕಾರ ನೀಡಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೋಮವಾರ(ಅ.1) ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಜೆಡಿಎಸ್ ಜಯಭೇರಿ ಬಾರಿಸಿದೆ. ಅಕ್ಟೋಬರ್ 3ರಂದು ಬಿಜೆಪಿಗೆ ಅಧಿಕಾರ ಹಸ್ತಾಂತರ ಇಲ್ಲ ಎಂದು ಜೆಡಿಎಸ್ ಮೂಲಗಳು ಹೇಳಿವೆ. ಒಂದು ವೇಳೆ ಅನಿವಾರ್ಯ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಿದರೆ ಅಥವಾ ನೀಡದಿದ್ದರೇ ಬರಬಹುದಾದ ಸಂವಿಧಾನಾತ್ಮಕ ಬಿಕ್ಕಟ್ಟನ್ನು ಪರಿಶೀಲಿಸಲು, ಹಲವು ನ್ಯಾಯವಾದಿಗಳನ್ನೂ ಗೌಡರು ಈಗಾಲೇ ಸಂಪರ್ಕಿಸಿದ್ದಾರೆ.
ಕುಮಾರಸ್ವಾಮಿ ರಾಜೀನಾಮೆ ನೀಡಲು ಸಿದ್ಧರಿದ್ದರೂ ಪಕ್ಷವು ಅದನ್ನು ತಿರಸ್ಕರಿಸಿದೆ. ದೇವೇಗೌಡರು ಸೋಮವಾರ ಸಂಜೆ (ಅ.1) ಪಕ್ಷದ ಮುಖಂಡರೊಡನೆ ಚರ್ಚಿಸಲಿದ್ದಾರೆ. ಕುಮಾರ ಸ್ವಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಲು ಓಲೈಸಲಿದ್ದಾರೆ.
(ದಟ್ಸ್ಕನ್ನಡ ವಾರ್ತೆ)
Comments
Story first published: Monday, October 1, 2007, 18:11 [IST]