ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಸರಾ ಉದ್ಘಾಟನೆಗೂ ಅಂಟಿದ ರಾಜಕೀಯದ ನಂಟು

By Staff
|
Google Oneindia Kannada News

ಬೆಂಗಳೂರು, ಅ.7 : ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದ ಉದ್ಘಾಟನೆ ಹೊಣೆಯನ್ನು ಆದಿಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಹಸ್ತಾಂತರಿಸಲಾಗಿದೆ. ಅವರು ಅ.12ರಂದು ನಯನ ಮನೋಹರ ದಸರಾ ನಾಡಹಬ್ಬಕ್ಕೆ ಚಾಲನೆ ನೀಡಲಿದ್ದಾರೆ.

ಈ ಮುಂಚೆ ಉದ್ಘಾಟನೆಯ ಉಸ್ತುವಾರಿಯನ್ನು ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಯವರಿಗೆ ವಹಿಸಲಾಲಾಗಿತ್ತು. ಆದರೆ ಅವರು ಅನಾರೋಗ್ಯದ ಕಾರಣ ಬರಲಾಗುತ್ತಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಆದ ಕಾರಣ ಮುಖ್ಯಮಂತ್ರಿಗಳು ಬಾಲಗಂಗಾಧರಸ್ವಾಮೀಜಿ ಅವರ ಹೆಸರನ್ನು ಸೂಚಿಸಿದರು ಎಂದು ಸಹಕಾರ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅ.12ರಂದು ಬೆಳಗ್ಗೆ 8.30ಕ್ಕೆ ಚಾಮುಂಡೇಶ್ವರಿ ಬೆಟ್ಟದಲ್ಲಿ ಸಿದ್ಧಗಂಗಾ ಮಠಾಧೀಶರು ದಸರಾ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದರು.

ಅವರ ನಿಕಟವರ್ತಿಗಳ ಪ್ರಕಾರ ಅಧಿಕಾರ ಹಸ್ತಾಂತರ ವಿಷಯದಲ್ಲಿ ಮಾತು ತಪ್ಪಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರ ವರ್ತನೆಯಿಂದ ಬೇಸರಗೊಂಡು ಸ್ವಾಮೀಜಿ ಈ ನಿರ್ಧಾರಕ್ಕೆ ಬಂದಿದ್ದಾರೆಂದು ತಿಳಿದುಬಂದಿದೆ. ಡಾ. ಶಿವಕುಮಾರ ಸ್ವಾಮಿಯವರಿಗೆ ನೂರು ವರ್ಷ ತುಂಬಿದ ಸಂದರ್ಭದಲ್ಲಿ ಅಧಿಕಾರ ಹಸ್ತಾಂತರ ಖಚಿತ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ವಾಗ್ದಾನ ಮಾಡಿದ್ದನ್ನು ಇಲ್ಲಿ ನೆನಸಿಕೊಳ್ಳಬಹುದು.

(ದಟ್ಸ್‌ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X