ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರಾಷ್ಟ್ರಪತಿ ಆಡಳಿತದ ಔಚಿತ್ಯ?: ಕೇಂದ್ರ ಸಂಪುಟ ಚರ್ಚೆ
ನವದೆಹಲಿ, ಅ.09 : ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಸಂಪುಟ ಸಭೆ ಮಂಗಳವಾರ(ಅ.09) ರಾತ್ರಿ ನಿರ್ಣಯ ಕೈಗೊಳ್ಳಲಿದೆ.
ಬಿಜೆಪಿ ಬೆಂಬಲ ಹಿಂತೆಗೆತದಿಂದ ಬಹುಮತ ಕಳೆದುಕೊಂಡ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ತಮ್ಮ ಸ್ಥಾನಕ್ಕೆ ಸೋಮವಾರ ರಾತ್ರಿ ರಾಜೀನಾಮೆ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಕರ್ನಾಟಕದ ರಾಜ್ಯಪಾಲ ರಾಮೇಶ್ವರ ಠಾಕೂರ್, ರಾಷ್ಟ್ರಪತಿ ಆಡಳಿತ ಜಾರಿಗೆ ಶಿಫಾರಸು ಮಾಡಿದ್ದಾರೆ.
ಕುಮಾರಸ್ವಾಮಿ ರಾಜೀನಾಮೆ ನಂತರದ ರಾಜಕೀಯ ಪರಿಸ್ಥಿತಿಯನ್ನು ಸೋಮವಾರ ರಾತ್ರಿ ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದರು. ಪ್ರಧಾನಿ ಮನಮೋಹನ್ ಸಿಂಗ್ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಹಿರಿಯ ಸಚಿವ ಪ್ರಣಬ್ ಮುಖರ್ಜಿ, ಅರ್ಜುನ್ ಸಿಂಗ್, ಎ.ಕೆ.ಆಂಟನಿ ಮತ್ತು ಹೆಚ್.ಆರ್.ಭಾರಧ್ವಜ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಎಂ.ಕೆ.ನಾರಾಯಣ್ ಮತ್ತು ಗೃಹ ಕಾರ್ಯದರ್ಶಿ ಮಧುಕರ್ ಗುಪ್ತಾ ಹಾಜರಿದ್ದರು.
(ಏಜನ್ಸೀಸ್)
Comments
Story first published: Tuesday, October 9, 2007, 11:46 [IST]