ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಠಾಕೂರ್ ದೆಹಲಿ ಭೇಟಿ ಮತ್ತೆ ಕಾವೇರಿದ ರಾಜ್ಯ ರಾಜಕೀಯ
ಬೆಂಗಳೂರು, ಅ.22 : ರಾಜ್ಯಪಾಲ ರಾಮೇಶ್ವರ್ ಠಾಕೂರ್ ಸೋಮವಾರ (ಅ.22) ಸಂಜೆ ದಿಢೀರನೆ ದೆಹಲಿಗೆ ತೆರಳಿದ್ದಾರೆ. ಗೊಂದಲದ ಗೂಡಾಗಿರುವ ರಾಜ್ಯ ರಾಜಕೀಯ ವಲಯದಲ್ಲಿ ರಾಜ್ಯಪಾಲರ ಈ ಭೇಟಿ ಕುತೂಹಲ ಕೆರಳಿಸಿದೆ.
ಅಧಿಕೃತ ಕಾರ್ಯಕ್ರಮಗಳ ನಿಮಿತ್ತ ರಾಜ್ಯಪಾಲರು ದೆಹಲಿಗೆ ತೆರಳಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ. ಆದರೆ ಉನ್ನತ ಮೂಲಗಳ ಪ್ರಕಾರ ರಾಜ್ಯದ ವಾಸ್ಥವ ಸ್ಥಿತಿಯನ್ನು ವಿವರಿಸಲು ಅವರು ಪ್ರಧಾನಿ, ರಾಷ್ಟ್ರಪತಿ ಮತ್ತು ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲರನ್ನು ಭೇಟಿಯಾಗಲಿದ್ದಾರೆಂದು ತಿಳಿದು ಬಂದಿದೆ.
ರಾಜ್ಯಪಾಲರ ಈ ಭೇಟಿ ರಾಷ್ಟ್ರಪತಿ ಆಳ್ವಿಕೆಗೆ ಮುನ್ನುಡಿಯೆ? ಈ ಬಗ್ಗೆ ಯಾವುದೇ ವಿವರಗಳಿಲ್ಲ. ಕೆಲದಿನಗಳಿಂದ ತಣ್ಣಗಿದ್ದ ರಾಜ್ಯ ರಾಜಕಾರಣ ರಾಜ್ಯಪಾಲರ ಭೇಟಿಯಿಂದ ಮತ್ತೆ ಕಾವೇರಿದೆ.
(ದಟ್ಸ್ಕನ್ನಡ ವಾರ್ತೆ)
Comments
Story first published: Monday, October 22, 2007, 17:20 [IST]