ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರಾಷ್ಟ್ರಪತಿ ಆಡಳಿತ ಅಂತ್ಯ:'ಕಮಲ'ಅರಳಲು ಕಾಲ ಪಕ್ವ
ಬೆಂಗಳೂರು, ನ.08 : ದೀಪಾವಳಿ ರಾಜ್ಯಕ್ಕೆ ಬೆಳಕು ತಂದಿದೆ. ರಾಜ್ಯದಲ್ಲಿನ ರಾಷ್ಟ್ರಪತಿ ಆಡಳಿತ ತೆರವಿಗೆ ಗುರುವಾರ ನಡೆದ ಕೇಂದ್ರ ಸಂಪುಟ ಸಭೆ ಸಮ್ಮತಿಸಿದೆ. ಈ ಪರಿಣಾಮ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಸರ್ಕಾರ ರಚಿಸಲು ವೇದಿಕೆ ಸಜ್ಜಾಗಿದೆ.
ಕರ್ನಾಟಕದ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರ ಎರಡು ಶಿಫಾರಸ್ಸಿನ ಅನ್ವಯ ರಾಷ್ಟ್ರಪತಿ ಆಡಳಿತ ಕೊನೆಗೊಳಿಸಲು ಸಭೆ ತೀರ್ಮಾನಿಸಿತು. ಸಭೆ ತೀರ್ಮಾನವನ್ನು ರಾಷ್ಟ್ಪಪತಿ ಪ್ರತಿಭಾ ಪಾಟೀಲ್ ಪರಿಗಣಿಸಿ, ರಾಷ್ಟ್ಪಪತಿ ಆಡಳಿತ ತೆರವುಗೊಳಿಸಿ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆಗಳಿವೆ. ಸಂಪುಟ ಸಭೆ ತೀರ್ಮಾನವನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸ್ವಾಗತಿಸಿದ್ದಾರೆ.
ಸದ್ಯದಲ್ಲಿಯೇ ಸರ್ಕಾರ ರಚನೆಗೆ ರಾಜ್ಯಪಾಲರು ಆಹ್ವಾನ ನೀಡುತ್ತಾರೆ ಎಂಬ ವಿಶ್ವಾಸವನ್ನು ಬಿಜೆಪಿ ನಾಯಕರು ವ್ಯಕ್ತಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Thursday, November 8, 2007, 13:17 [IST]