3ನೇ ಟೆಸ್ಟ್ ಪಂದ್ಯದಲ್ಲಿ ಧೋನಿ,ಸಚಿನ್ ಅನುಮಾನ
ಬೆಂಗಳೂರು, ಡಿ.7 : ನಗರದಲ್ಲಿ ನಡೆಯಲಿರುವ ಪಾಕ್ ವಿರುದ್ಧದ ಮೂರನೇ ಮತ್ತು ಕೊನೆಯ ಟೆಸ್ಟ್ ಪಂದ್ಯದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಥವಾ ಉಪ ನಾಯಕ ಎಂ.ಎಸ್.ಧೋನಿ ಪಾಲ್ಗೊಳ್ಳುವುದು ಅನುಮಾನ ಎಂದು ಟೀಮ್ ಇಂಡಿಯಾ ನಾಯಕ ಅನಿಲ್ ಕುಂಬ್ಳೆ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಶುಕ್ರವಾರ(ಡಿ.7)ಮಾತನಾಡುತ್ತಿದ್ದ ಅವರು, ಕೋಲ್ಕತ್ತಾದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಿಂದ ಸಚಿನ್ ಮೊಣಕಾಲು ಗಾಯದಿಂದ ಬಳಲುತ್ತಿದ್ದಾರೆ. ಅವರು ಆಟ ಆಡಲು ಸಾಧ್ಯವೇ ಅಥವಾ ಇಲ್ಲವೇ ಎಂಬುದು ನಾಳೆ ತೀರ್ಮಾನವಾಗಲಿದೆ. ಅದೇ ರೀತಿ ಧೋನಿ ಬಲ ಪಾದದ ಗಾಯದಿಂದ ಬಳಲುತ್ತಿದ್ದಾರೆ. ಅವರಿಗೆ ಏಳು ದಿನಗಳ ವಿಶ್ರಾಂತಿಯನ್ನು ವೈದ್ಯರು ಸೂಚಿಸಿದ್ದಾರೆ. ಒಟ್ಟಿನಲ್ಲಿ ಇವರಿಬ್ಬರಲ್ಲಿ ಒಬ್ಬರು ಆಟ ಆಡದಿರುವ ಸಾಧ್ಯತೆ ಹೆಚ್ಚಾಗಿದೆ ಎಂದರು.
ಶನಿವಾರದಿಂದ ಆರಂಭವಾಗಲಿರುವ ಪಂದ್ಯದಲ್ಲಿ ಟಾಸ್ ಪ್ರಮುಖ ಪಾತ್ರವಹಿಸಲಿದೆ. ಭಾರತ ಸರಣಿಯನ್ನು ತನ್ನದಾಗಿಸಿಕೊಳ್ಳುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಕುಂಬ್ಳೆ, ಇರ್ಫಾನ್ ಪಠಾಣ್ ಮತ್ತು ವಿ.ಆರ್.ವಿ.ಸಿಂಗ್ ತಂಡ ಪ್ರವೇಶಿಸಿದ್ದಾರೆ. ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಇದು ಒಳ್ಳೆ ಅವಕಾಶ ಎಂದು ಅಭಿಪ್ರಾಯಪಟ್ಟರು.
(ಯುಎನ್ಐ)