49ನೇ ಹುಟ್ಟುಹಬ್ಬದ ದಿನ ಪಣ ತೊಟ್ಟರು ಕುಮಾರಸ್ವಾಮಿ
ಬೆಂಗಳೂರು, ಡಿ.16 : ಇಂದು(ಡಿ.16) ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ 49ನೇ ಹುಟ್ಟುಹಬ್ಬ. ತಮ್ಮ ತಂದೆ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಕುಮಾರಸ್ವಾಮಿ, ಆಶೀರ್ವಾದ ಪಡೆದರು.
ಕುಮಾರಸ್ವಾಮಿ ಅಭಿಮಾನಿಗಳು ಮತ್ತು ಜೆಡಿಎಸ್ ಕಾರ್ಯಕರ್ತರು ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಸಿಹಿ ಹಂಚಿ ಸಂಭ್ರಮಿಸಿದರು. ಇಂದು ಬೆಳಗ್ಗೆ ಬೆಂಗಳೂರಿನ ವಿವಿಧ ದೇವಸ್ಥಾನಗಳಲ್ಲಿ ಕುಮಾರಸ್ವಾಮಿ ಪೂಜೆ ಸಲ್ಲಿಸಿದರು. ರಾಜರಾಜೇಶ್ವರಿ ದೇವಸ್ಥಾನಕ್ಕೆ ತಮ್ಮ ಪತ್ನಿ ಅನಿತಾ ಅವರೊಡನೆ ಆಗಮಿಸಿದ್ದ ಅವರು, ಪೂಜೆ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
ಈ ದಿನ ಮಹತ್ವದ ದಿನ. ಇಂದು ರಾಜಕೀಯ ಸವಾಲುಗಳನ್ನು ಎದುರಿಸಲು ಪಣ ತೊಡುತ್ತಿದ್ದೇನೆ. ಡಿ.23ರಿಂದ ರಾಜ್ಯ ಪ್ರವಾಸ ಮಾಡಲಿದ್ದು, ಪಕ್ಷವನ್ನು ಬಲಪಡಿಸಲಿದ್ದೇನೆ. ಜನಪರ ಸರ್ಕಾರವನ್ನು ಮತ್ತೆ ರಾಜ್ಯದಲ್ಲಿ ಸ್ಥಾಪಿಸುವುದು ನಮ್ಮ ಉದ್ದೇಶ. ಜಯದ ಹಾದಿಗೆ ನಮ್ಮನ್ನು ಕರೆದೊಯ್ಯಲು ರಾಜರಾಜೇಶ್ವರಿ ಅಮ್ಮನ ಆಶೀರ್ವಾದ ಕೋರಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು. ಅವರ ಅಭಿಮಾನಿಗಳು ಈ ಸಂದರ್ಭದಲ್ಲಿ ಬಡವರಿಗೆ ಅಕ್ಕಿ ವಿತರಿಸಿದರು.
(ದಟ್ಸ್ ಕನ್ನಡ ವಾರ್ತೆ)