ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖಾಕಿ ಕಳಚಿ ಖಾದಿ ತೊಡಲು ಸಿದ್ಧವಾದ ರಾಮಮೂರ್ತಿ

By Staff
|
Google Oneindia Kannada News

ಬೆಂಗಳೂರು, ಡಿ.29: ಪೊಲಿಸ್ ಇಲಾಖೆಯ ದಕ್ಷ ಅಧಿಕಾರಿ ಹಾಗೂ ಸಾರ್ವಜನಿಕ ವಲಯದಲ್ಲಿ ಸ್ನೇಹಮಯಿ ವ್ಯಕ್ತಿತ್ವ ಹೊಂದಿರುವ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಕೆ.ಸಿ. ರಾಮಮೂರ್ತಿ ಸದ್ಯದಲ್ಲೇಖಾಕಿ ಕಳಚಿಖಾದಿ ತೊಡಲಿದ್ದಾರೆ. ಪ್ರಸ್ತುತ ಅವರು ಬೆಂಗಳೂರುನಗರದ ಹೆಚ್ಚುವರಿ ಪೊಲಿಸ್ ಆಯುಕ್ತರಾಗಿ ಸೇವೆಸಲ್ಲಿಸುತ್ತಿದ್ದಾರೆ.

ಮೂಲತಃ ಬೆಂಗಳೂರಿನವರಾದ ರಾಮಮೂರ್ತಿ ಇಲಾಖೆಯಲ್ಲಿ ದಕ್ಷ ಹಾಗೂ ನೇರ, ನಿಷ್ಠೆಯ ವ್ಯಕ್ತಿತ್ವಕ್ಕೆ ಹೆಸರಾದವರು. ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಸಕ್ರಿಯ ರಾಜಕೀಯಕ್ಕೆ ಬರಲಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ. ಪ್ರಮುಖ ರಾಜಕೀಯ ಪಕ್ಷಗಳು ಈಗಾಗಲೇ ರಾಮಮೂರ್ತಿಯವರನ್ನು ಸಂಪರ್ಕಿಸಿವೆ. ಆದರೆ ಅವರು ಯಾವ ಪಕ್ಷ ಸೇರುತ್ತಾರೆ ಎನ್ನುವುದು ಇನ್ನೂ ಖಚಿತವಾಗಿ ತಿಳಿದುಬಂದಿಲ್ಲ. ರಾಜಕೀಯ ಪ್ರವೇಶಿಸಲು ಎಸಿಪಿ ಬಿ.ಕೆ.ಶಿವರಾಂ ಮತ್ತು ದಿವಾಕರ್ ಈಗಾಗಲೇ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ.

(ದಟ್ಸ್‌ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X