ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ ಅಂತ್ಯದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ

By Staff
|
Google Oneindia Kannada News

CEC N. Gopalaswamyಬೆಂಗಳೂರು, ಜ.10 : ರಾಜ್ಯ ವಿಧಾನಸಭೆ ಚುನಾವಣೆಯನ್ನು ಮುಂದೂಡುವ ಪ್ರಶ್ನೆಯೇ ಇಲ್ಲ. ಮೇ ಅಂತ್ಯದಲ್ಲಿ ಚುನಾವಣೆ ನಡೆದೇ ನಡೆಯುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿ ಎನ್. ಗೋಪಾಲಸ್ವಾಮಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಮತದಾರರ ಪಟ್ಟಿಯಲ್ಲಿ ದೋಷಗಳು ಅವ್ಯಾಹತವಾಗಿ ನುಸುಳಿರುವುದರಿಂದ ಚುನಾವಣೆಯನ್ನು ಮುಂದೂಡಬೇಕು ಎಂಬ ಕಾಂಗ್ರೆಸ್‌ನ ಬೇಡಿಕೆಯನ್ನು ಗೋಪಾಲಸ್ವಾಮಿ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.

ಫೆಬ್ರವರಿ ಅಂತ್ಯದ ವೇಳೆಗೆ ಪರಿಷ್ಕೃತ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ತದನಂತರ ಮತ್ತೆ ಮತ್ತೆ ಪಟ್ಟಿಯನ್ನು ಪರಿಷ್ಕರಣೆ ಮಾಡಲಾಗುವುದಿಲ್ಲ ಎಂದು ವಿಧಾನಸಭೆಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾಧಿಕಾರಿ ಗುರುವಾರ ತಿಳಿಸಿದರು.

ಮೇ ಅಂತ್ಯದಲ್ಲಿ ಚುನಾವಣೆ ನಡೆಯುತ್ತದೆಂದು ಹೇಳಿರುವ ಅವರು ನಿಗದಿತ ದಿನಾಂಕದ ಬಗ್ಗೆ ನಿಖರವಾಗಿ ಹೇಳಿಲ್ಲ. ಚುನಾವಣೆಯ ದಿನಾಂಕವನ್ನು ನಂತರ ನಿಗದಿಪಡಿಸಲಾಗುವುದು ಎಂದು ಹೇಳಿದರು.

ಚುನಾವಣೆ ಮುಂದೂಡದಿದ್ದರಿಂದ ಬಿಜೆಪಿ ಪಾಳಯದಲ್ಲಿ ಹರ್ಷದ ವಾತಾವರಣ ಸೃಷ್ಟಿಯಾಗಿದೆ. ಮತದಾರರ ಪಟ್ಟಿಯಲ್ಲಿ ನಕಲಿ ಮತದಾರರು ನುಸುಳಿದ್ದರೆ ಅದರ ಬಗ್ಗೆ ಚುನಾವಣೆ ಆಯೋಗ ನಿರ್ಧಾರ ತೆಗೆದುಕೊಳ್ಳುತ್ತದೆ. ಪರಿಷ್ಕರಣೆ ಅದಕ್ಕೆ ಬಿಟ್ಟ ವಿಚಾರ. ಯಾವ ರಾಜಕೀಯ ಪಕ್ಷ ಈ ಕುರಿತು ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ನುಡಿದಿದ್ದಾರೆ.

(ದಟ್ಸ್‌ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X