ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ತ್ರಿಕೋಣ ಸರಣಿ: ಯುವ ಆಟಗಾರರಿಗೆ ಬಿಸಿಸಿಐ ಮಣೆ
ಮುಂಬಯಿ: ಜ.20: ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ನಡುವಿನ ತ್ರಿಕೋಣ ಸರಣಿಗೆ 16 ಜನ ಆಟಗಾರರ ತಂಡವನ್ನು ಬಿಸಿಸಿಐ ಪ್ರಕಟ ಮಾಡಿದೆ. ಮಹೇಂದರ್ ಸಿಂಗ್ ಧೋನಿಯನ್ನು ನಾಯಕನನ್ನಾಗಿ ಮುಂದುವರೆಸಲಾಗುವುದು. ಯುವ ಆಟಗಾರರಿಗೆ ಈ ಬಾರಿ ಪ್ರಾಶಸ್ತ್ಯ ನೀಡಲಾಗಿದೆ ಎಂದು ಬಿಸಿಸಿಐ ನ ಕಾರ್ಯದರ್ಶಿ ನಿರಂಜನ್ ಶಾ ಹೇಳಿದ್ದಾರೆ.
ಫೆ. 3 ರಿಂದ ತ್ರಿಕೋಣ ಸರಣಿ ಪ್ರಾರಂಭವಾಗಲಿದೆ. ಹಿರಿಯ ಆಟಗಾರರಾದ ಸೌರವ್ ಗಂಗೂಲಿ, ಲಕ್ಷ್ಮಣ್, ದ್ರಾವಿಡ್ ಅವರನ್ನು ತಂಡದಿಂದ ಹೊರಹಾಕಲಾಗಿದೆ. ಶ್ರೀಶಾಂತ್ ,ರೋಹಿತ್ ಶರ್ಮಾ, ಸುರೇಶ್ ರೈನಾ, ಪಿಯೂಶ್ ಚಾವ್ಲಾ, ಪ್ರವೀಣ್ ಕುಮಾರ್ , ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ.
(ದಟ್ಸ್ ಕ್ರಿಕೆಟ್ ವಾರ್ತೆ)
Comments
Story first published: Sunday, January 20, 2008, 13:23 [IST]