ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಪ್ರಥಮ ಬಾರಿಗೆ ನಗರಕ್ಕೆ ರಾಷ್ಟ್ರಪತಿಗಳ ಆಗಮನ
ಬೆಂಗಳೂರು, ಫೆ.1: ಮೂರು ದಿನಗಳ ರಾಜ್ಯ ಪ್ರವಾಸಕ್ಕಾಗಿ ಶುಕ್ರವಾರ(ಫೆ.1) ಪ್ರತಿಭಾ ಪಾಟೀಲ್ ಅವರು ರಾಷ್ಟ್ರಪತಿ ಆದ ನಂತರ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಇಂದು ಮಧ್ಯಾಹ್ನ ನವದೆಹಲಿಯಿಂದ ಆಗಮಿಸಿದ ಅವರು ಸಂಜೆ 6 ಗಂಟೆಗೆ ಬೆಂಗಳೂರು ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಂಗಳೂರು ಮೀಡಿಯೇಷನ್ ಕೇಂದ್ರದ ಪ್ರಥಮ ವಾರ್ಷಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ಫೆ.2ರಂದು ರಾಜ್ಯ ಸರ್ಕಾರದ ಮಹತ್ವದ ಪ್ರವಾಸೋದ್ಯಮ ಯೋಜನೆಯಾದ 'ಸುವರ್ಣ ರಥ' ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಫೆ.3ರಂದು ಹಂಪಿಗೆ ಭೇಟಿ ಕೊಟ್ಟು ಅಲ್ಲಿನ ಚಾರಿತ್ರಿಕ ಮಹತ್ವದ ಸ್ಥಳಗಳನ್ನು ವೀಕ್ಷಿಸಲಿದ್ದಾರೆ. ಹಾಗೆಯೇ ರಾಷ್ಟ್ರಪತಿ ಆಳ್ವಿಕೆಯಲ್ಲಿ ರಾಜ್ಯದಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಲಿದ್ದಾರೆ.
(ದಟ್ಸ್ಕನ್ನಡ ವಾರ್ತೆ)
Comments
Story first published: Friday, February 1, 2008, 13:07 [IST]