ತೆರೆದ ಬಸ್ಸಲ್ಲಿ ವಿಶ್ವ ಚಾಂಪಿಯನ್ನರಿಗೆ ಭವ್ಯ ಸ್ವಾಗತ
ಬೆಂಗಳೂರು, ಮಾ.4: ಕೌಲಾಲಂಪುರದಲ್ಲಿ ನಡೆದ ಕಿರಿಯರ ವಿಶ್ವಕಪ್ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 12 ರನ್ಗಳಿಂದ ಜಯ ಗಳಿಸಿದ ಭಾರತ ತಂಡಕ್ಕೆ ಮಂಗಳವಾರ ಬೆಂಗಳೂರಿನಲ್ಲಿ ಭವ್ಯ ಸ್ವಾಗತ ಕಾರ್ಯಕ್ರಮವನ್ನು ಬಿಸಿಸಿಐ ಆಯೋಜಿಸಿದೆ.
ಮಲೇಷ್ಯಾದಿಂದ ಇಂದು ಬೆಂಗಳೂರಿಗೆ ಆಗಮಿಸುವ ವಿಶ್ವ ಚಾಂಪಿಯನ್ನರನ್ನು ತೆರೆದ ವಾಹನದಲ್ಲಿ ಸಂಜೆ 4ಗಂಟೆಗೆ ಎಚ್ಎಎಲ್ ವಿಮಾನ ನಿಲ್ದಾಣದಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭವ್ಯ ಮೆರವಣಿಗೆಯಲ್ಲಿ ಕರೆತರಲಾಗುವುದು. ಸಂಜೆ 6 ಗಂಟೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿಸಿಸಿಐ ಅಧ್ಯಕ್ಷ ಶರದ್ ಪವಾರ್ ವಿಶ್ವ ವಿಜೇತರನ್ನು ಸನ್ಮಾನಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬ ಆಟಗಾರನಿಗೂ ಬಿಸಿಸಿಐ 15 ಲಕ್ಷ ರೂ.ಗಳನ್ನು ಬಹುಮಾನ ನೀಡಲಿದೆ.
ಆಟಗಾರರನ್ನು ಕರೆತರಲು ಕೆಎಸ್ಆರ್ಟಿಸಿಯ ವಿಶೇಷ ತೆರೆದ ಬಸ್ಸನ್ನು ಈಗಾಗಲೇ ಸಿದ್ಧಗೊಳಿಸಲಾಗಿದೆ. ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಮಾನಪುರ,ದೊಮ್ಮಲೂರು, ಟ್ರಿನಿಟಿ ಸರ್ಕಲ್, ಎಂ.ಜಿ.ರ ಸ್ತೆಯಲ್ಲಿ ವಿಶೇಷ ವಾಹನ ಸಂಚರಿಸುವ ಕಾರಣ ಈ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಲಿದೆ. ಇಂಡಿಯನ್ ಪ್ರೀಮಿಯಲ್ ಲೀಗ್(ಐಪಿಎಲ್)ನ ಬೆಂಗಳೂರು ತಂಡದ ಮಾಲಿಕ ವಿಜಯ ಮಲ್ಯ, ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಹಾಗೂ ಇತರೆ ಕ್ರಿಕೆಟಿಗರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
(ದಟ್ಸ್ಕನ್ನಡ ಕ್ರೀಡಾವಾರ್ತೆ)