ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಲ್ಬರ್ಗಜಿಲ್ಲೆಯಲ್ಲಿ ಸೂರ್ಯನ ಉಗ್ರ ಪ್ರತಾಪ

By Staff
|
Google Oneindia Kannada News

ಬೆಂಗಳೂರು, ಏ.23: ಕರ್ನಾಟಕದಲ್ಲಿ ಬಿಸಿಲಿನ ಬೇಗೆ ಮುಂದುವರಿದಿದೆ. ಮೂರು ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಹತ್ತು ಜಿಲ್ಲೆಗಳ ಪರಿಸ್ಥಿತಿ ಇದಕ್ಕಿಂತಲೂ ಭಿನ್ನವಾಗಿಲ್ಲ. ಹವಾನಿಯಂತ್ರಿತ ಬೆಂಗಳೂರು ಸಹ ಸೆಖೆಗೆ ವಿಲವಿಲ ಎನ್ನುತ್ತಿದೆ.

ಗುಲ್ಬರ್ಗದಲ್ಲಿ 42 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಬಿಸಿಮುಟ್ಟಿಸುತ್ತಿದೆ. ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಸೂರ್ಯ ತನ್ನ ಉಗ್ರ ಪ್ರತಾಪ ತೋರಿಸುತ್ತಿದ್ದಾನೆ. ಅಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕೊಪ್ಪಳದಲ್ಲಿ 38 ಡಿಗ್ರಿ ಉಷ್ಣಾಂಶ ಇದ್ದರೆ, ಕೋಲಾರ, ಚಿತ್ರದುರ್ಗ, ಮಂಡ್ಯ, ತುಮಕೂರು, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಜಿಲ್ಲೆಗಳಲ್ಲಿ37 ಡಿಗ್ರಿ ಸೆಲ್ಸಿಯಸ್‌ನಷ್ಟು ಬಿಸಿಲ ಬೇಗೆ ದಾಖಲಾಗಿದೆ.

ಇನ್ನು ಉದ್ಯಾನ ನಗರಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಏರುತ್ತಿದೆ. ಮಂಗಳವಾರ 37 ಡಿಗ್ರಿ ಸೆಲ್ಸಿಯಸ್‌‍ನಷ್ಟು ದಾಖಲಾಗಿದೆ. ಮುಂದಿನ ಎರಡು ದಿನಗಳಲ್ಲಿ ತಾಪಮಾನ ಮತ್ತಷ್ಟು ಏರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

(ದಟ್ಸ್‌ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X