ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಾವಣಗೆರೆ: ಮಲ್ಲಿಕಾರ್ಜುನ ಸ್ಪರ್ಧೆ ಅಸಿಂಧು

By Staff
|
Google Oneindia Kannada News

ದಾವಣಗೆರೆ,ಏ.30: ಕೊನೆ ಕ್ಷಣದಲ್ಲಿ ನಾಟಕೀಯ ಬೆಳವಣಿಗೆ ಮೂಲಕ ಉತ್ತರ ದಾವಣಗೆರೆ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ನಾಮಪತ್ರ ಪರಿಶೀಲನೆ ವೇಳೆಯಲ್ಲಿ ತಿರಸ್ಕೃತಗೊಂಡಿದೆ.

ಮೇ 16 ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆಗೆ ಸಲ್ಲಿಸಿರುವ ನಾಮಪತ್ರಗಳ ಪರಿಶೀಲನೆ ನಡೆಸಲಾಗಿದ್ದು, ಕಾಂಗ್ರೆಸ್ ಪಕ್ಷ ತನ್ನ ಬಿ ಪಾರಂನಲ್ಲಿ ಇಬ್ಬರ ಹೆಸರನ್ನು ನಮೊದಿಸಿದೆ ಹಾಗೂ ಬಿಪಾರಂನ್ನು ತಿದ್ದುಪಡಿ ಮಾಡಲಾಗಿದೆ ಎಂದು ನಾಮಪತ್ರವನ್ನು ತಿರಸ್ಕಾರ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಪಾಂಡುರಂಗ ತಿಳಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷ ಒಂದು ಕ್ಷೇತ್ರವನ್ನು ಕಳೆದುಕೊಳ್ಳುವುದು ಖಚಿತವಾಗಿದೆ.

ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಅಭ್ಯರ್ಥಿಯಾಗಿ ಈಗಾಗಲೇ ಸಯ್ಯದ್ ಸೈಪುಲ್ಲ್ ನಾಮಪತ್ರ ಸಲ್ಲಿಸಿದ್ದರು. ಅದರೆ ಪಕ್ಷದ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಗೆ ಟಿಕೆಟ್ ನೀಡಬೇಕೆಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಗ್ರ ಪ್ರತಿಭಟನೆಗೆ ನಡೆಸಿದ್ದರು. ಪ್ರತಿಭಟನೆಗೆ ಹೆದರಿದ ಕಾಂಗ್ರೆಸ್ ಹೈಕಮಾಂಡ್, ಹೆಲಿಕ್ಯಾಪ್ಟರ್ ಮೂಲಕ ಮಲ್ಲಿಕಾರ್ಜುನ ಅವರಿಗೆ ಬಿ ಪಾರಂ ನ್ನು ಕಳುಹಿಸಿಕೊಟ್ಟಿತ್ತು. ತೀವ್ರ ಗೊಂದಲದ ನಡುವೆ ಎಸ್.ಎಸ್.ಮಲ್ಲಿಕಾರ್ಜುನ ನಾಮಪತ್ರವನ್ನು ಸಲ್ಲಿಸಿದ್ದರು.

ಈ ಘಟನೆಯಿಂದ ಪಕ್ಷಕ್ಕೆ ಹಿತಕ್ಕೆ ದಕ್ಕೆಯಾಗಿದೆ ಎಂದು ಪರಿಗಣಿಸಿರುವ ಹಿರಿಯ ಮುಖಂಡರು, ಮಲ್ಲಿಕಾರ್ಜುನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಖಜಾಂಚಿ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X