ಸರ್ ಎಂ. ವಿಶ್ವೇಶ್ವರಯ್ಯ ಸಮಾಧಿ ಸ್ಥಿತಿ ದೇವರೇ ಗತಿ

ಚಿಕ್ಕಬಳ್ಳಾಪುರದ ನಂದಿ ಬೆಟ್ಟದ ಬುಡದಲ್ಲಿರುವ ಮುದ್ದೇನಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯ ಅವರ ಸಮಾಧಿಯ ನವೀಕರಣ ಕಾರ್ಯ ಸಾಗಿದ್ದರೂ ಸರ್ಕಾರ ಬಿಡುಗಡೆ ಮಾಡಿರುವ ಹಣ ಯಾತಕ್ಕೂ ಸಾಲದಂತಾಗಿ ಕುಂಭಕರ್ಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ.
ಇಡೀ ಜಗತ್ತೇ ನಿಬ್ಬೆರಗಾಗುವಂತೆ ಕನ್ನಂಬಾಡಿಯ ಮುಂದೆ ಬೃಂದಾವನ ಗಾರ್ಡನ್ ಅನ್ನು ನಿರ್ಮಿಸಲಾಗಿದ್ದರೂ ವಿಶ್ವೇಶ್ವರಯ್ಯ ಅವರ ಸಮಾಧಿಯ ಮುಂದೆ ಒಂದು ಸಣ್ಣ ಉದ್ಯಾನವನ ನಿರ್ಮಿಸುವ ಕಾರ್ಯ ಹಣ, ಸಿಬ್ಬಂದಿ ಮತ್ತು ಸರ್ಕಾರದ ಬದ್ಧತೆಯ ಕೊರತೆಯಿಂದಾಗಿ ಕುಂಟುತ್ತ ಸಾಗಿದೆ. ಉದ್ಯಾನವನದ ನಿರ್ಮಾಣಕ್ಕೆ ಕೇವಲ ಮೂರು ಲಕ್ಷ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಒಂದೂವರೆ ಲಕ್ಷ ಹಣ ಬೇಲಿಯೇ ನುಂಗಿ ಹಾಕಿದೆ. ಇನ್ನು ಉದ್ಯಾನವನಕ್ಕೆಲ್ಲಿ ವ್ಯಯಿಸುವುದು ಎಂದು ನಿರ್ಮಾಣದ ಉಸ್ತುವಾರಿ ವಹಿಸಿರುವ ತೋಟಗಾರಿಕಾ ಇಲಾಖೆ ಅಪಸ್ವರವೆತ್ತಿದೆ.
ಈ ಕುರಿತಾಗಿ ವಿವಿಧ ಸಂಘಟನೆಗಳ, ಬ್ಯಾಂಕ್ ಅಧಿಕಾರಿಗಳ, ಬೇರೆಬೇರೆ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ಜಿಲ್ಲಾಧಿಕಾರಿಯ ನೇತೃತ್ವದಲ್ಲಿ ಕರೆಯಲಾಗಿತ್ತು. ಉದ್ಯಾನವನದ ನಿರ್ಮಾಣ ಮತ್ತು ನಿರ್ವಹಣೆಯ ಹೊಣೆಯನ್ನು ತೋಟಗಾರಿಕೆ ಇಲಾಖೆಯ ಸುಪರ್ದಿಗೆ ವಹಿಸಲಾಗಿತ್ತು. ಜೀರ್ಣೋದ್ಧಾರ ಕ್ರಿಯೆಯನ್ನು ತೋಟಗಾರಿಕೆ ಇಲಾಖೆ ಕೈಗೊಂಡಿದೆಯಾದರೂ ಕೆಲಸಗಾರ ಕೊರತೆಯೆಂಬ ನೆಪವೊಡ್ಡಿ ಕೈಚೆಲ್ಲಿ ಕುಳಿತುಬಿಟ್ಟಿದೆ. ಕೆಲಸ ಬೇಗನೆ ಮುಗಿಯಬೇಕೆಂದರೆ ಇನ್ನೂ ಹೆಚ್ಚಿನ ಕೆಲಸಗಾರರ ಅಗತ್ಯವಿದೆಯೆಂಬುದು ಇಲಾಖೆಯ ನಿರ್ದೇಶಕಿ ಡಾ.ಗಾಯತ್ರಿ ಅವರ ಅಭಿಪ್ರಾಯ.
ರಾಷ್ಟ್ರದ ಹೆಮ್ಮೆಯ ಪುತ್ರನ ಸಮಾಧಿಗೊದಗಿದ ದಯನೀಯ ಸ್ಥಿತಿ ಕಂಡು ಮುದ್ದೇನಹಳ್ಳಿಯ ನಿವಾಸಿಗಳೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆ ಹಾಳುಮೂಳೆಂದು ಕೋಟಿಗಟ್ಟಲೆ ವ್ಯಯಿಸುವ ರಾಜಕಾರಣಿಗಳು ಮತ್ತು ಸರ್ಕಾರಕ್ಕೆ ದಕ್ಷಿಣ ಕರ್ನಾಟಕದ ಜನತೆ ಕಾವೇರಿ ನೀರು ಕುಡಿಯುವಂತೆ ಮಾಡಿರುವ ವ್ಯಕ್ತಿಯ ಕಡೆ ಗಮನಹರಿಸುತ್ತಿಲ್ಲವೆಂದು ದಿವ್ಯ ನಿರ್ಲಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.
ಸಮಾಧಿಯದು ಈ ಸ್ಥಿತಿಯಾದರೆ, ಬೆಂಗಳೂರಿನಲ್ಲಿರುವ ವಿಶ್ವೇಶ್ವರಯ್ಯ ಮ್ಯೂಸಿಯಂದು 'ಹೈಟೆಕ್' ದಯನೀಯ ಸ್ಥಿತಿ. ಪ್ರತಿಯೊಬ್ಬರು ತಲಾ ಮೂವತ್ತು ರುಪಾಯಿ ತೆತ್ತು ವಸ್ತುಸಂಗ್ರಹಾಲಯದ ಒಳಹೊಕ್ಕರೆ ಕಾಸಿಗೆ ಮೋಸ ಹೋಗಿರುವುದು ಗಮನಕ್ಕೆ ಬರುವುದು ಗ್ಯಾರಂಟಿ. ಪ್ರದರ್ಶನಕ್ಕಿಟ್ಟಿರುವ ಯಾವ ಯಂತ್ರ, ವಸ್ತುಗಳಾಗಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಅಸಲಿಗೆ ನಿರ್ವಹಣೆಗೆ, ಅಮೂಲ್ಯ ವಸ್ತುಗಳು ಹಾಳಾಗದಂತೆ ಕಾಯಲು ಅಲ್ಲಿ ಸಿಬ್ಬಂದಿಗಳೇ ಇಲ್ಲ. ವೀಕ್ಷಿಸಲು ಬಂದ ಪ್ರತಿಯೊಬ್ಬರೂ 'ವಿಜ್ಞಾನಿ'ಗಳೇ. ವಿಜ್ಞಾನಕ್ಕೆ ಸಂಬಂಧಿಸಿದ ನೂರಾರು ಅಮೂಲ್ಯ ಸಲಕರಣೆಗಳು ಹಾಳುಬಿದ್ದುಹೋಗಿವೆ. ಅವಿನ್ನೆಂದು ಸರಿಹೋಗಲಿಕ್ಕೂ ಇಲ್ಲ. ಶಾಲಾಮಕ್ಕಳನ್ನು ದಂಡುದಂಡಾಗಿ ಕರೆದುಕೊಂಡು ಬರುವ ಶಿಕ್ಷಕರಿಗೆ, ಮಕ್ಕಳಿಗೆ ಈ ಸ್ಥಳ ಒಂದು ಪಿಕ್ನಿಕ್ ಸ್ಪಾಟ್ನಂತಾಗಿದೆ.
(ಏಜೆನ್ಸೀಸ್)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications