ಸರ್ ಎಂ. ವಿಶ್ವೇಶ್ವರಯ್ಯ ಸಮಾಧಿ ಸ್ಥಿತಿ ದೇವರೇ ಗತಿ

ಚಿಕ್ಕಬಳ್ಳಾಪುರದ ನಂದಿ ಬೆಟ್ಟದ ಬುಡದಲ್ಲಿರುವ ಮುದ್ದೇನಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯ ಅವರ ಸಮಾಧಿಯ ನವೀಕರಣ ಕಾರ್ಯ ಸಾಗಿದ್ದರೂ ಸರ್ಕಾರ ಬಿಡುಗಡೆ ಮಾಡಿರುವ ಹಣ ಯಾತಕ್ಕೂ ಸಾಲದಂತಾಗಿ ಕುಂಭಕರ್ಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ.
ಇಡೀ ಜಗತ್ತೇ ನಿಬ್ಬೆರಗಾಗುವಂತೆ ಕನ್ನಂಬಾಡಿಯ ಮುಂದೆ ಬೃಂದಾವನ ಗಾರ್ಡನ್ ಅನ್ನು ನಿರ್ಮಿಸಲಾಗಿದ್ದರೂ ವಿಶ್ವೇಶ್ವರಯ್ಯ ಅವರ ಸಮಾಧಿಯ ಮುಂದೆ ಒಂದು ಸಣ್ಣ ಉದ್ಯಾನವನ ನಿರ್ಮಿಸುವ ಕಾರ್ಯ ಹಣ, ಸಿಬ್ಬಂದಿ ಮತ್ತು ಸರ್ಕಾರದ ಬದ್ಧತೆಯ ಕೊರತೆಯಿಂದಾಗಿ ಕುಂಟುತ್ತ ಸಾಗಿದೆ. ಉದ್ಯಾನವನದ ನಿರ್ಮಾಣಕ್ಕೆ ಕೇವಲ ಮೂರು ಲಕ್ಷ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಒಂದೂವರೆ ಲಕ್ಷ ಹಣ ಬೇಲಿಯೇ ನುಂಗಿ ಹಾಕಿದೆ. ಇನ್ನು ಉದ್ಯಾನವನಕ್ಕೆಲ್ಲಿ ವ್ಯಯಿಸುವುದು ಎಂದು ನಿರ್ಮಾಣದ ಉಸ್ತುವಾರಿ ವಹಿಸಿರುವ ತೋಟಗಾರಿಕಾ ಇಲಾಖೆ ಅಪಸ್ವರವೆತ್ತಿದೆ.
ಈ ಕುರಿತಾಗಿ ವಿವಿಧ ಸಂಘಟನೆಗಳ, ಬ್ಯಾಂಕ್ ಅಧಿಕಾರಿಗಳ, ಬೇರೆಬೇರೆ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ಜಿಲ್ಲಾಧಿಕಾರಿಯ ನೇತೃತ್ವದಲ್ಲಿ ಕರೆಯಲಾಗಿತ್ತು. ಉದ್ಯಾನವನದ ನಿರ್ಮಾಣ ಮತ್ತು ನಿರ್ವಹಣೆಯ ಹೊಣೆಯನ್ನು ತೋಟಗಾರಿಕೆ ಇಲಾಖೆಯ ಸುಪರ್ದಿಗೆ ವಹಿಸಲಾಗಿತ್ತು. ಜೀರ್ಣೋದ್ಧಾರ ಕ್ರಿಯೆಯನ್ನು ತೋಟಗಾರಿಕೆ ಇಲಾಖೆ ಕೈಗೊಂಡಿದೆಯಾದರೂ ಕೆಲಸಗಾರ ಕೊರತೆಯೆಂಬ ನೆಪವೊಡ್ಡಿ ಕೈಚೆಲ್ಲಿ ಕುಳಿತುಬಿಟ್ಟಿದೆ. ಕೆಲಸ ಬೇಗನೆ ಮುಗಿಯಬೇಕೆಂದರೆ ಇನ್ನೂ ಹೆಚ್ಚಿನ ಕೆಲಸಗಾರರ ಅಗತ್ಯವಿದೆಯೆಂಬುದು ಇಲಾಖೆಯ ನಿರ್ದೇಶಕಿ ಡಾ.ಗಾಯತ್ರಿ ಅವರ ಅಭಿಪ್ರಾಯ.
ರಾಷ್ಟ್ರದ ಹೆಮ್ಮೆಯ ಪುತ್ರನ ಸಮಾಧಿಗೊದಗಿದ ದಯನೀಯ ಸ್ಥಿತಿ ಕಂಡು ಮುದ್ದೇನಹಳ್ಳಿಯ ನಿವಾಸಿಗಳೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆ ಹಾಳುಮೂಳೆಂದು ಕೋಟಿಗಟ್ಟಲೆ ವ್ಯಯಿಸುವ ರಾಜಕಾರಣಿಗಳು ಮತ್ತು ಸರ್ಕಾರಕ್ಕೆ ದಕ್ಷಿಣ ಕರ್ನಾಟಕದ ಜನತೆ ಕಾವೇರಿ ನೀರು ಕುಡಿಯುವಂತೆ ಮಾಡಿರುವ ವ್ಯಕ್ತಿಯ ಕಡೆ ಗಮನಹರಿಸುತ್ತಿಲ್ಲವೆಂದು ದಿವ್ಯ ನಿರ್ಲಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.
ಸಮಾಧಿಯದು ಈ ಸ್ಥಿತಿಯಾದರೆ, ಬೆಂಗಳೂರಿನಲ್ಲಿರುವ ವಿಶ್ವೇಶ್ವರಯ್ಯ ಮ್ಯೂಸಿಯಂದು 'ಹೈಟೆಕ್' ದಯನೀಯ ಸ್ಥಿತಿ. ಪ್ರತಿಯೊಬ್ಬರು ತಲಾ ಮೂವತ್ತು ರುಪಾಯಿ ತೆತ್ತು ವಸ್ತುಸಂಗ್ರಹಾಲಯದ ಒಳಹೊಕ್ಕರೆ ಕಾಸಿಗೆ ಮೋಸ ಹೋಗಿರುವುದು ಗಮನಕ್ಕೆ ಬರುವುದು ಗ್ಯಾರಂಟಿ. ಪ್ರದರ್ಶನಕ್ಕಿಟ್ಟಿರುವ ಯಾವ ಯಂತ್ರ, ವಸ್ತುಗಳಾಗಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಅಸಲಿಗೆ ನಿರ್ವಹಣೆಗೆ, ಅಮೂಲ್ಯ ವಸ್ತುಗಳು ಹಾಳಾಗದಂತೆ ಕಾಯಲು ಅಲ್ಲಿ ಸಿಬ್ಬಂದಿಗಳೇ ಇಲ್ಲ. ವೀಕ್ಷಿಸಲು ಬಂದ ಪ್ರತಿಯೊಬ್ಬರೂ 'ವಿಜ್ಞಾನಿ'ಗಳೇ. ವಿಜ್ಞಾನಕ್ಕೆ ಸಂಬಂಧಿಸಿದ ನೂರಾರು ಅಮೂಲ್ಯ ಸಲಕರಣೆಗಳು ಹಾಳುಬಿದ್ದುಹೋಗಿವೆ. ಅವಿನ್ನೆಂದು ಸರಿಹೋಗಲಿಕ್ಕೂ ಇಲ್ಲ. ಶಾಲಾಮಕ್ಕಳನ್ನು ದಂಡುದಂಡಾಗಿ ಕರೆದುಕೊಂಡು ಬರುವ ಶಿಕ್ಷಕರಿಗೆ, ಮಕ್ಕಳಿಗೆ ಈ ಸ್ಥಳ ಒಂದು ಪಿಕ್ನಿಕ್ ಸ್ಪಾಟ್ನಂತಾಗಿದೆ.
(ಏಜೆನ್ಸೀಸ್)
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications