ಮೇ. 12 ರಿಂದ ರಾಹುಲ್ ಗಾಂಧಿ ಪ್ರಚಾರ ಕಾರ್ಯ
ಗೋವಾ, ಮೇ 11:ಕಾಂಗ್ರೆಸ್ಸಿನ ಯುವನಾಯಕ ರಾಹುಲ್ ಗಾಂಧಿ ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರ ಕಾರ್ಯಕ್ಕಾಗಿ ಮೇ. 12 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಸೋಮವಾರ ಗೋವಾಕ್ಕೆ ಆಗಮಿಸುವ ರಾಹುಲ್ ಗಾಂಧಿ ಅವರು ಕೆಲಕಾಲ ವಿಶ್ರಾಂತಿ ಪಡೆದು ನಂತರ ಕರ್ನಾಟಕದ ಕರಾವಳಿ ಭಾಗದಿಂದ ಕಾಂಗ್ರೆಸ್ ನ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.
ಮೇ. 12 ರಂದು ಉತ್ತರಕನ್ನಡ ಜಿಲ್ಲೆಯ ಕುಮಟಾ, ಉಡುಪಿ ಜಿಲ್ಲೆಯ ಕುಂದಾಪುರ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಪ್ರಚಾರ ಕಾರ್ಯ ಪೂರೈಸಿ, ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿಗೆ ರಾಹುಲ್ ಅವರು ತೆರಳಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರರು ಹೇಳಿದ್ದಾರೆ.
ರಾಜ್ಯದ ಯುವ ಜನತೆಯನ್ನು ಆಕರ್ಷಿಸುವಲ್ಲಿ ರಾಹುಲ್ ಗಾಂಧಿಯ ಆಗಮನ ಸಹಕಾರಿಯಾಗಲಿದೆ. ಅವರ 5 ದಿನಗಳ ಡಿಸ್ಕವರ್ ಇಂಡಿಯಾ ಕಾರ್ಯಕ್ರಮ ಫಲಪ್ರದವಾಗಿದ್ದು ಇದಕ್ಕೆ ನಿದರ್ಶನ. ಎರಡನೇ ಹಾಗೂ ಮೂರನೇ ಹಂತದ ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೊಪ್ಪಳಕ್ಕೆ ಮೇ. 13 ರಂದು ಆಗಮಿಸಲಿದ್ದಾರೆ. ನಂತರ ಮಂಗಳೂರಿಗೆ ತೆರಳಲಿದ್ದಾರೆ ಎಂದು ವಕ್ತಾರರು ಹೇಳಿದರು.
(ದಟ್ಸ್ ಕನ್ನಡವಾರ್ತೆ)