ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಸಗೊಬ್ಬರ ಆಭಾವ, ಸಿಎಂರಿಂದ ಹೈಟೆಕ್ ಪರೀಶೀಲನೆ

By Staff
|
Google Oneindia Kannada News

ಬೆಂಗಳೂರು, ಜೂ.4 : ರಾಜ್ಯಪಾಲರ ಆಡಳಿತದ ನಿರ್ಲಕ್ಷದಿಂದಾಗಿ ಉಂಟಾಗಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ಆಭಾವ ವಿವಾದದ ಹಿನ್ನಲೆಯಲ್ಲಿ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ಮುಂದುವರೆದಿವೆ. ಬುಧವಾರ ಧಾರವಾಡದಲ್ಲಿ ಸಮರ್ಪಕವಾಗಿ ರಸಗೊಬ್ಬರ ದೊರೆಯದಿರುವುದನ್ನು ಖಂಡಿಸಿ ಪ್ರತಿಭಟನೆಗಳಿದ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಕಳೆದ ಕೆಲವು ರಸಗೊಬ್ಬರ ಸಮಸ್ಯೆ ಉಲ್ಬಣಿಸಿದ್ದು, ದಾವಣಗೆರೆ, ಅರಕಲಗೂಡು ತುಮಕೂರು ಹಾಗೂ ಇದೀಗ ಧಾರವಾಡದಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ದೊರೆದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆಗೆ ಇಳಿದಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ರಸಗೊಬ್ಬರ ಆಭಾವ ಎದುರಿಸುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಸಮಸ್ಯೆಯನ್ನು ಆಲಿಸಿದರು.

ನೂತನ ಸರ್ಕಾರದ ಆರಂಭದಲ್ಲೇ ಎದುರಾಗಿರುವ ರಸಗೊಬ್ಬರ ಮತ್ತು ಬಿತ್ತನೆ ಬೀಜದ ಮೇಲಿನ ಸಬ್ಸಿಡಿ ಸಮಸ್ಯೆ ನಿವಾರಣೆಗೆ ಮಹತ್ವದ ಹೆಜ್ಜೆ ಇಟ್ಟಿದೆ. ಹಣದ ಅಸೆಗಾಗಿ ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಿಕೊಂಡರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X