ಗೋಲಿಬಾರ್ಗೆ ಬಲಿಯಾದ ಸಿದ್ದಲಿಂಗಪ್ಪ ಯಾರು?
ಹಾವೇರಿ, ಜೂ.12 : ಇಷ್ಟಕ್ಕೂ ಮಂಗಳವಾರ ಹಾವೇರಿಯಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ಸಿದ್ದಲಿಂಗಪ್ಪ ಚೂರಿ ಯಾರು? ಆತನ ಸಾವಿನ ಬಗ್ಗೆ ಮನೆಯವರು, ನೆರೆಹೊರೆಯವರು ಹಾಗೂ ಪೊಲೀಸರು ಏನು ಹೇಳುತ್ತಾರೆ?
ಏಳು ಜನ ಒಡಹುಟ್ಟಿದವರಲ್ಲಿ (ಇಬ್ಬರು ಸಹೋದರರು ಹಾಗೂ ಐದು ಮಂದಿ ಸಹೋದರಿಯರು)ಸಿದ್ದಲಿಂಗಪ್ಪ ಎಲ್ಲರಿಗಿಂತಲೂ ಕಿರಿಯ. ಈತನನ್ನು ಕಳೆದುಕೊಂಡ ಚೂರಿ ಕುಟುಂಬ ಇಂದು ದುಃಖದ ಮಡುವಿನಲ್ಲಿ ರೋದಿಸುತ್ತಿದೆ. ಜನಪ್ರತಿನಿಧಿಗಳು ಮಾತ್ರ ಹಿಂಡು ಹಿಂಡಾಗಿ ಬಂದು ಕುಟುಂಬದವರಿಗೆ ಸಾಂತ್ವನದ ಮಾತುಗಳನ್ನು ಹೇಳುತ್ತಲೇ ಇದ್ದಾರೆ. ಮೃತನ ಕುಟುಂಬಕ್ಕೆ ಹಾವೇರಿಯ ಹೊರವಲಯದಲ್ಲಿ 30 ಎಕರೆ ಜಮೀನಿದೆ. ಯಾರೊಬ್ಬರ ವಿಷಯದಲ್ಲೂ ಮೂಗು ತೂರಿಸದ ಉತ್ತಮ ಕುಟುಂಬ ಎಂಬ ಹೆಸರಿತ್ತು. ಆದರೆ ಈ ರೀತಿ ಪೊಲೀಸರ ಗುಂಡಿಗೆ ಬಲಿಯಾಗುತ್ತಾನೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ.
ಸಾಧು ಲಿಂಗಾಯತ ಸಮುದಾಯಕ್ಕೆ ಸೇರಿದ ಚೂರಿ ಕುಟುಂಬಕ್ಕೆ ಭಾರಿ ಮತ್ತು ಮಧ್ಯಮ ಗಾತ್ರದ ನೀರಾವರಿ ಸಚಿವ ಬಸವರಾಜ್ ಬೊಮ್ಮಾಯಿ ಸಂಬಂಧಿಕರೂ ಹೌದು. ಸಿದ್ದಲಿಂಗಪ್ಪನ ಅಣ್ಣ ಷಣ್ಮುಖ ಬಿಜೆಪಿ ಹಾಗೂ ಹಾವೇರಿ ಸಿಎಂಸಿ ಸದಸ್ಯ. ಹಾವೇರಿ ವ್ಯವಸಾಯ ಸಹಕಾರ ಸಂಘದ ಅಧ್ಯಕ್ಷರು ಸಹ. ಕಾವ್ಯ (7) ಮತ್ತು ಕಿರಣ್ (11) ಸಿದ್ದಲಿಂಗಪ್ಪನ ಮಕ್ಕಳು. ಪತ್ನಿ ಕುಸುಮಾ ಮನೆವಾರ್ತೆ ನೋಡಿಕೊಳ್ಳುತ್ತಾರೆ.
ಕುಟುಂಬದ ಕೆಲವರ ಪ್ರಕಾರ, ಸಿದ್ದಲಿಂಗಪ್ಪ ಮಂಗಳವಾರ ರಸಗೊಬ್ಬರ ತರಲು ಹೋಗಿದ್ದರಂತೆ. ನಗರದಲ್ಲಿ ಗದ್ದಲದ ವಾತಾವರಣ ಇರುವ ಕಾರಣ ಶಾಲೆಯಿಂದ ಮಕ್ಕಳನ್ನು ಕರೆತರಲು ಹೋಗಿದ್ದರು ಎನ್ನುತ್ತಾರೆ ಮತ್ತೂ ಕೆಲವರು. ಆದರೆ ಪೊಲೀಸರು ಹೇಳುವ ಕಥೆಯೇ ಬೇರೆ, ಅಂದು ಸಿದ್ದಲಿಂಗಪ್ಪ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ. ಪೊಲೀಸ್ ವಾಹನ ಹಾಗೂ ಪೊಲೀಸರೆಡೆಗೆ ಕಲ್ಲು ತೂರುತ್ತಿದ್ದ. ಇದೆಲ್ಲವೂ ವಿಡಿಯೋದಲ್ಲಿ ಚಿತ್ರೀಕರಣವಾಗಿದೆ ಎನ್ನುತ್ತಾರೆ ಪೊಲೀಸರು. ನೆರೆಹೊರೆಯವರು ಹೇಳುವಂತೆ ಸಿದ್ದಲಿಂಗಪ್ಪ ಬಿಜೆಪಿಯ ಸದಸ್ಯರಾಗಿರಲಿಲ್ಲ ಆದರೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರ ಪ್ರಚಾರ ಮಾಡಿದ್ದ ಅಷ್ಟೆ ಎನ್ನುತ್ತಾರೆ.
(ದಟ್ಸ್ಕನ್ನಡ ವಾರ್ತೆ)
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications